ಮನಾಮ: ಬಹರೈನ್ ಸುನ್ನೀ ಕನ್ನಡಿಗರ ಆವೇಶ ಕೆ.ಸಿ.ಎಫ್, ವರ್ಷಂಪ್ರತಿ ನಡೆಸುವ ಬೃಹತ್ ಇಫ್ತಾರ್ ಸಂಗಮವು ದಿನಾಂಕ 1-6-2018ರಂದು ಸಂಜೆ 5 ಗಂಟೆಗೆ ಬಹರೈನ್ ಮನಾಮದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು.ಇದು ಕೇವಲ ಇಫ್ತಾರ್ ಕಾರ್ಯಕ್ರಮ ಮಾತ್ರವಾಗಿರದೆ, ಬಹರೈನಿನ ಅಷ್ಟ ದಿಕ್ಕುಗಳಿಂದಲೂ ಆಗಮಿಸಿದ ಅನಿವಾಸಿ ಕನ್ನಡಿಗರ ಸಂಗಮವೂ ಆಗಿತ್ತು.
ಕೆಸಿಎಫ್ ಬಹರೈನ್ ನ ಬೃಹತ್ ಇಫ್ತಾರ್ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣವನ್ನು ಕೆ.ಸಿ.ಎಫ್ ಅಂತರ್ ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷರೂ, ಕರ್ನಾಟಕ ಎಸ್. ವೈ.ಎಸ್ ಪ್ರಧಾನ ಕಾರ್ಯದರ್ಶಿ, ಭಾಷಣ ರತ್ನ ಎಂ.ಎಸ್.ಎಂ ಝೈನಿ ಕಾಮಿಲ್ ಸಖಾಫಿ ಉಸ್ತಾದರು ನೆರವೇರಿಸಿದರು. ವಿಶೇಷ ಅತಿಥಿಯಾಗಿ ಪ್ಯಾಲೆಸ್ತೀನ್ ರಾಯಭಾರಿ ಸನ್ಮಾನ್ಯ ತ್ವಾಹ ಎಂ.ಅಬ್ದುಲ್ ಖಾದರ್ ಹಾಗೂ ಎನ್ಆರ್ ಐಕೆ ಬಹರೈನ್ ಇದರ ಚೇರ್ಮನ್ ಲೀಲಾಧರ್ ಬೈಕಂಪಾಡಿ ರವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಕನ್ನಡ ಸಂಘ ಬಹರೈನ್ ಮಾಜಿ ಅಧ್ಯಕ್ಷರಾದ ರಾಜ್ ಕುಮಾರ್,ದಕ್ಷಿಣ ಕನ್ನಡ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಮೆಟೆಲ್ಕೊ ರಝಾಕ್ ಹಾಜಿ ,ರಶೀದ್ ರೆಮಿ ಅಲ್ಲದೆ ಹಲವಾರು ಉಲಮಾಗಳು, ಸಾಮಾಜಿಕ ನೇತಾರರು ಭಾಗವಹಿಸಿದ್ದರು.
ಈ ಕಾರ್ಯಕ್ರಮಕ್ಕೆ ಕೆ.ಸಿ.ಎಫ್ ಐಎನ್ಸಿ, ರಾಷ್ಟ್ರೀಯ, ಝೋನಲ್ ಹಾಗೂ ಸೆಕ್ಟರ್ ನೇತಾರರೂ ಹಾಗೂ ಕಾರ್ಯಕರ್ತ ರರು ಬಾಗವಿಸಿದ್ದರು.ಅಲ್ಲದೆ ಬಹರೈನ್ ವಿವಿಧ ಅನಿವಾಸಿ ಸಂಘಟನೆಗಳ ನೇತಾರರು, ಸದಸ್ಯರು ಗಳು ಪಾಲ್ಗೊಂಡಿದ್ದರು.ಕಾರ್ಯಕ್ರಮದ ಆರಂಭದಲ್ಲಿ ಮಜೀದ್ ಸಅದಿ ಉಸ್ತಾದರವರ ದುಃಅ ನೆರವೇರಿಸಿ,ಕೆಸಿಎಫ್ ರಾಷ್ಟ್ರೀಯ ಸಮಿತಿ ಆಡಳಿತ ವಿಭಾಗದ ಚೇರ್ಮನ್ ಬಶೀರ್ ಕಾರ್ಲೆ ರವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಸ್ವಾಗತವನ್ನು ಕೋರಿ, ಕಾರ್ಯಕ್ರಮದ ನಿರೂಪಣೆಯನ್ನು ನೆರವೇರಿಸಿದರು. ಕಾರ್ಯಕ್ರಮ ವನ್ನು ಅಝ್ಹರ್ ತಂಙಳ್ ರವರ ದುಃಅ ಮತ್ತು ಬುರ್ದಾ ಆಲಾಪನೆಯೊಂದಿಗೆ ಕೊನೆಗೊಳಿಸಲಾಯಿತು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು