janadhvani

Kannada Online News Paper

ಕೆಸಿಎಫ್ ಬಹರೈನ್: ಮೀಲಾದ್ ಕಾನ್ಫರೆನ್ಸ್ ಯಶಸ್ವಿಗೆ ಕರೆ

ಕೆಸಿಎಫ್ ಬಹರೈನ್ ವತಿಯಿಂದ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮವು ಇದೇ ಸೆಪ್ಟೆಂಬರ್ 6 ರಂದು ಶುಕ್ರವಾರ ರಾತ್ರಿ 7:30 ಕ್ಕೆ ಸರಿಯಾಗಿ ಮನಾಮ ಕನ್ನಡ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಪ್ರಭಾಷಣಗಾರರಾಗಿ ಹಾಫಿಝ್ ಮಸ್ವೂದ್ ಸಖಾಫಿ ಗೂಡಲ್ಲೂರು ಆಗಮಿಸಲಿದ್ದಾರೆ. ಅಲ್ಲದೇ ಹಲವಾರು ಸಾಮಾಜಿಕ, ಧಾರ್ಮಿಕ ನೇತಾರರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎಂದು ಕೆಸಿಎಫ್ ರಾಷ್ಟ್ರೀಯ ಸಮಿತಿಯ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಕರೆ ನೀಡಿದ್ದಾರೆ.

ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲ, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ಮೀಲಾದ್ ಕಾನ್ಫರೆನ್ಸ್ ಸ್ವಾಗತ ಸಮಿತಿ ಚೇರ್ಮಾನ್ ಲತೀಫ್ ಪೆರೋಲಿ, ಕನ್ವೀನರ್ ತೌಫೀಖ್ ಬೆಳ್ತಂಗಡಿ, ವೈಸ್ ಚೇರ್ಮಾನ್ ಅಶ್ರಫ್ ಕಿನ್ಯ, ಶಿಕ್ಷಣ ಇಲಾಖೆ ಅಧ್ಯಕ್ಷ ಹನೀಫ್ ಮುಸ್ಲಿಯಾರ್, ಗುದೈಬಿಯಾ ಸೆಕ್ಟರ್ ಉಪಾಧ್ಯಕ್ಷ ಶಿಹಾಬ್ ಪರಪ್ಪ, ಕಾರ್ಯದರ್ಶಿ ವೇಣೂರು ಉಸ್ತಾದ್, ಕೋಶಾಧಿಕಾರಿ ಮಜೀದ್ ಪೈಂಬಚ್ಚಾಲ್, ರಾಷ್ಟ್ರೀಯ ಸಮಿತಿ ಮಾಜಿ ಕೋಶಾಧಿಕಾರಿ ಇಕ್ಬಾಲ್ ಮಂಜನಾಡಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com