ಚಿಕ್ಕಮಗಳೂರು ಜಿಲ್ಲೆಯ ಪ್ರತಿಷ್ಠಿತ ಧಾರ್ಮಿಕ ಹಾಗು ಶಿಕ್ಷಣ ಸಂಸ್ಥೆಯಾದ ಜಾಮಿಯಾ ಕಂಜೂಲ್ ಇಮಾನ್ ಸಂಸ್ಥೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪ್ರವಾದಿ ಮಹಮ್ಮದ್ ಪೈಗಂಬರ್ ರವರ ಜನ್ಮ ದಿನಾಚರಣೆ ಅಂಗವಾಗಿ 12 ದಿನಗಳ ಮಿಲಾದ್ ಆಚರಣೆಯು ಅದ್ದೂರಿಯಾಗಿ ವಿಜ್ರಂಭಣೆಯಿಂದ ಆಚರಿಸಲಾಗುವುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಅಲ್ ಹಾಜ್ ಫೈರೋಜ್ ಅಹಮದ್ ರಜ್ವಿ ರವರು ತಿಳಿಸಿದ್ದಾರೆ .
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಜ್ವಿ ರಬ್ಬಿವುಲ್ ಅವ್ವಲ್ ಚಂದ್ರದರ್ಶನದ ಮೊದಲ ದಿನದಿಂದ 12 ನೆ ರಬ್ಬಿವುಲ್ ಅವ್ವಲ್ ರವರಿಗೆ ಪ್ರತಿನಿತ್ಯ ಇಶಾ ನಮಾಜಿನ ಬಳಿಕ ಧಾರ್ಮಿಕ ವಿದ್ವಾಂಸರಿಂದ ಪ್ರವಚನ ಹಾಗು ನಾತೆ ಷರೀಫ್ ಗಾಯನ ಪ್ರತಿಭೋತ್ಸವ ಸ್ಫರ್ಧೆ,ಬುರ್ದ ಮಜ್ಲಿಸ್, ಅನ್ನ ಸಂತರ್ಪಣೆಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದು ತಿಳಿಸಲಾಗಿದೆ 12 ನೆ ಅಂತಿಮ ದಿನದಂದು ಪ್ರಖ್ಯಾತ ಸುನ್ನಿ ವಿದ್ವಾಂಸರಿಂದ ಪ್ರವಚನ ಹಾಗು ವಿಜೇತ ಸ್ಪರ್ಧಿಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು ನಂತರ ಅದೇ ರಾತ್ರಿ ಜಾಗರಣೆ ಮಾಡಿ ಬೆಳಗ್ಗಿನ ಜಾವ ಸುಬಹ ಸಾದಿಕ್ ಸಂದರ್ಭದಲ್ಲಿ ಮೌಲುದ್ ಪಠಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ