ಮನಾಮ: ಏರ್ ಇಂಡಿಯಾ ಎಕ್ಸ್ಪ್ರೆಸ್ನ ಪರಿಷ್ಕೃತ ಬ್ಯಾಗೇಜ್ ನೀತಿಯನ್ನು ಬದಲಿಸುವಂತೆ ಪ್ರವಾಸಿ ಲೀಗಲ್ ಸೆಲ್ ಆಗ್ರಹಿಸಿದೆ. ಈ ನೀತಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೇಂದ್ರ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಅವರಿಗೆ ಪ್ರವಾಸಿ ಲೀಗಲ್ ಸೆಲ್ ಮನವಿ ಸಲ್ಲಿಸಿದೆ.
ಗಲ್ಫ್ ರಾಷ್ಟ್ರಗಳಲ್ಲಿನ ವಲಸಿಗರಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಬ್ಯಾಗೇಜ್ ಶುಲ್ಕದಲ್ಲಿನ ಬದಲಾವಣೆಯಿಂದ ಉಂಟಾದ ತೊಂದರೆಗಳನ್ನು ಅರ್ಜಿಯಲ್ಲಿ ಎತ್ತಿ ತೋರಿಸಲಾಗಿದೆ. ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ ಹ್ಯಾಂಡ್ ಕ್ಯಾರಿಯಾಗಿ ಸಾಗಿಸುವ ಲ್ಯಾಪ್ಟಾಪ್ಗಳಿಗೂ ವಿನಾಯಿತಿ ನೀಡುವುದಿಲ್ಲ. ಆದರೆ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಲ್ಯಾಪ್ಟಾಪ್ಗಳಿಗೆ ವಿನಾಯಿತಿ ನೀಡುತ್ತಿವೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ಪರಿಚಯಿಸಿರುವ ಹೊಸ ನೀತಿಯನ್ನು ಬದಲಾಯಿಸಲು ಕೇಂದ್ರ ವಿಮಾನಯಾನ ಸಚಿವಾಲಯ ಅಗತ್ಯ ಮಧ್ಯಸ್ಥಿಕೆ ವಹಿಸಬೇಕು ಎಂಬುದು ಅರ್ಜಿಯಲ್ಲಿನ ಪ್ರಮುಖ ಬೇಡಿಕೆಯಾಗಿದೆ.
ಅನಿವಾಸಿಗಳು ಹೆಚ್ಚಾಗಿ ಬಳಸುವ ಏರ್ ಇಂಡಿಯಾ ಎಕ್ಸ್ಪ್ರೆಸ್ ಈ ನೀತಿಯನ್ನು ತುರ್ತಾಗಿ ಸರಿಪಡಿಸಲಿದೆ ಎಂಬ ನಿರೀಕ್ಷೆಯಿದೆ, ವಿಫಲವಾದರೆ ನಾಗರಿಕ ವಿಮಾನಯಾನ ಸಚಿವಾಲಯವು ಮಧ್ಯಪ್ರವೇಶಿಸುವ ಭರವಸೆ ಇರುವುದಾಗಿ ಪ್ರವಾಸಿ ಲೀಗಲ್ ಸೆಲ್ ಗ್ಲೋಬಲ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು