ಮಂಗಳೂರು: ತಮ್ಮ ಪುರುಷಾಯುಷ್ಯವನ್ನಿಡೀ ನಾಡಿನ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಮುಡಿಪಾಗಿಟ್ಟು ದಶಕದ ಹಿಂದೆ ನಮ್ಮನ್ನಗಲಿದ ಆಧ್ಯಾತ್ಮ ಗುರು ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುಲ್ ರಹ್ಮಾನ್ ಅಲ್ ಬುಖಾರಿ ಉಳ್ಳಾಲ ತಂಙಳ್ ರವರ ಹನ್ನೊಂದನೇ ಉರೂಸ್ ಮುಬಾರಕ್ ಅಕ್ಟೋಬರ್ 4,5,6 ದಿನಾಂಕಗಳಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕುಳಂ ನಲ್ಲಿರುವ ಸಮಾಧಿ ಸ್ಥಳದಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಸಂಪೂರ್ಣ ಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸುನ್ನೀ ಯುವ ಜನ ಸಂಘ ಎಸ್ ವೈ ಎಸ್ ಕರೆ ನೀಡಿದೆ.
ಕೇರಳ ಮತ್ತು ತಮಿಳುನಾಡುಗಳಲ್ಲಿ ವಿದ್ಯಾಭ್ಯಾಸವನ್ನು ಮುಗಿಸಿ ತಮ್ಮ 30ನೇ ವರ್ಷದಲ್ಲಿ ಕರಾವಳಿ ಕರ್ನಾಟಕದ ಉಳ್ಳಾಲ ಪ್ರದೇಶಕ್ಕೆ ಧಾರ್ಮಿಕ ಸೇವೆ ಮತ್ತು ಶೈಕ್ಷಣಿಕ ಸೇವೆಗಾಗಿ ಆಗಮಿಸಿದ್ದ ತಂಙಳ್ ರವರು ಬಳಿಕ ನಾಡಿನ ಉದ್ದಗಲಕ್ಕೂ ತಮ್ಮ ಸೇವೆಯನ್ನು ವಿಸ್ತರಿಸಿದ್ದರು.
ಉಳ್ಳಾಲದಲ್ಲಿ ಮುದರ್ರಿಸ್ ಆಗಿ ಬಳಿಕ ಖಾಝಿಯಾಗಿ ಸೇವೆ ಸಲ್ಲಿಸಿದ ಅವರು ಉಳ್ಳಾಲ ಎಂಬ ಧಾರ್ಮಿಕ ಕೇಂದ್ರವನ್ನು ಕೇವಲ ಧರ್ಮಾಚರಣೆಗೆ ಮಾತ್ರ ಸೀಮಿತಗೊಳಿಸದೆ ಹಲವಾರು ಶಾಲಾ ಕಾಲೇಜು ಗಳನ್ನು ವಿವಿಧ ವಿದ್ಯಾಭ್ಯಾಸ ಕೇಂದ್ರಗಳನ್ನು ಸ್ಥಾಪಿಸಿ ಸಮಾಜದ ಅಭಿವೃದ್ಧಿಗಾಗಿ ನಾನಾ ವಿಧದ ಶೈಕ್ಷಣಿಕ ಯೋಜನೆಗಳನ್ನು ಹಮ್ಮಿಕೊಂಡು ಯಶಸ್ಸುಗೊಳಿಸಿದ್ದರು.
ಕರ್ನಾಟಕ ಮತ್ತು ಕೇರಳದ ನೂರಾರು ಮೊಹಲ್ಲಾ ಗಳ ಖಾಝಿಯಾಗಿ ಸೇವೆ ಸಲ್ಲಿಸಿದ್ದ ಅವರು ದೇಶ ವಿದೇಶಗಳಲ್ಲಿ ಪ್ರವಚನಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜಾಗೃತಿಯನ್ನು ಮೂಡಿಸುವಲ್ಲಿ ತೀವ್ರ ಪ್ರಯತ್ನ ನಡೆಸಿದ್ದರು.
ಎಲ್ಲಾ ಧರ್ಮೀಯರನ್ನು
ಜಾತಿ ಮತ ಭೇದವಿಲ್ಲದೆ ಸಮಾನವಾಗಿ ಕಾಣುತ್ತಿದ್ದ ಮತ್ತು ಎಲ್ಲರಿಂದಲೂ ಗೌರವಾದರಗಳನ್ನು ಪಡೆಯುತ್ತಿದ್ದ ತಾಜುಲ್ ಉಲಮಾರವರು ಕೋಮು ಸೌಹಾರ್ದತೆಯನ್ನು ಬಲಿಷ್ಠಗೊಳಿಸವಲ್ಲಿಯೂ ಬಹಳಷ್ಟು ಪ್ರಯತ್ನಿಸಿದ್ದರು.
ತಾಜುಲ್ ಉಲಮಾ ಉರೂಸ್ ಸಮಾರಂಭವು ಮೂರು ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಸಮಾಜ ಬಾಂಧವರು,ಸಂಘಟನಾ ಕಾರ್ಯಕರ್ತರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಎಸ್ ವೈ ಎಸ್ ರಾಜ್ಯ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಕರೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ