ರಿಯಾದಿನಲ್ಲಿ ಹಠಾತ್ ಅನಾರೋಗ್ಯಕ್ಕೊಳಗಾಗಿ ಮರಣ ಹೊಂದಿದ ಸಂಘ ಸಂಸ್ಥೆಗಳ ಹಿರಿಯ ನೇತಾರ ಹಮೀದ್ ಸುಳ್ಯರವರ ಬಾವ ನಝೀರ್ ಹುಸೈನ್ ಸಾಮೆತ್ತಡ್ಕ ಇವರ ಮೃತದೇಹವನ್ನು ಊರಿಗೆ ತಲುಪಿಸುವ ಕೆಲಸವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಯಿತು.

ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಕೂಡಲೇ ಅನಿವಾಸಿ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ಸೌದಿ ಅರೇಬಿಯಾದಲ್ಲಿ ನಿಧನರಾಗುವ ಅನಿವಾಸಿಗಳ ಮೃತದೇಹವನ್ನು ಇಲ್ಲಿ ದಫನ ಮಾಡುವುದು ಅಥವಾ ಊರಿಗೆ ಕೊಂಡೊಯ್ಯುವುದಿದ್ದರೆ ವಲಸೆ ನೀತಿಗೆ ಸಂಬಂಧಿಸಿದ ಹಲವಾರು ದಾಖಲೆ ಪತ್ರಗಳನ್ನು ಸರಿಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಭಾರತೀಯ ಧೂತವಾಸ ಕೇಂದ್ರ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಸಿಗಬೇಕಾದ ದಾಖಲೆಗಳನ್ನು ಸರಿಪಡಿಸಲು ಊರಿನಲ್ಲಿ ಮೃತರ ಸಂಬಂಧಿ ರಿಫಾಈ ಜನ್ನತ್ರವರು ಸಹಕರಿಸಿದರೆ ಸೌದಿ ಅರೇಬಿಯಾದಲ್ಲಿ ಕೆಸಿಎಫ್ ದಮ್ಮಾಮ್ ಝೋನ್ ಸಾಂತ್ವನ ಇಲಾಖೆ ನಾಯಕರಾದ ಬಾಷಾ ಗಂಗಾವಳಿ, ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರಾದ ಮಜೀದ್ ವಿಟ್ಲ , ಅಶ್ರಫ್ ಕೆಎಮ್ಮೆಸ್ ಮತ್ತು ಮೃತರ ಸಂಬಂಧಿ ಶಾಹೀನ್ ಸುಳ್ಯ ಮುಂತಾದವರು ತಮ್ಮ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಮುಂಚೂಣಿಯಲ್ಲಿದ್ದು ಶ್ರಮಿಸಿದರ ಫಲವಾಗಿ ಶೀಘ್ರವಾಗಿ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಮೃತದೇಹವನ್ನು ಊರಿಗೆ ಕಳುಹಿಸಲು ಸಾಧ್ಯವಾಯಿತು. ಕೆಸಿಎಫ್ ರಿಯಾದ್ ತಂಡದ ಈ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

02/10/24 ರಂದು ಬುಧವಾರ ಅಸರ್ ನಮಾಝ್ ಬಳಿಕ ನಡೆದ ಜನಾಝಾ ನಮಾಝ್ ನಲ್ಲಿ ಕೆಸಿಎಫ್ ಸೌದಿ ರಾಷ್ಟ್ರೀಯ ಅಧ್ಯಕ್ಷ
ರಾದ ನಝೀರ್ ಕಾಶಿಪಟ್ಣ ಹಾಗೂ ರಿಯಾದ್ ಝೋನ್ ಅಧ್ಯಕ್ಷರಾದ ರಾದ ಮುಸ್ತಫಾ ಸಅದಿ, ಕೆಸಿಎಫ್ ನಾಯಕರಾದ ರಝಾಕ್ ಉಸ್ತಾದ್ ತಲಕ್ಕಿ, ರಫೀಕ್ ಮದನಿ ಮತ್ತು ಮೃತರ ಕುಟುಂಬಸ್ಥರು, ಸ್ಥಳೀಯರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. 04/10/24ರಂದು ಶುಕ್ರವಾರ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿದ ಮೃತದೇಹವನ್ನು ಅಲ್ಲಿಂದ ಕೆಸಿಎಫ್ ಆಂಬ್ಯುಲೆನ್ಸ್ ಮೂಲಕ ಮೃತರ ನಿವಾಸಕ್ಕೆ ತಲುಪಿಸಲಾಗಿದೆ. ವಿಮಾನ ನಿಲ್ದಾಣದಿಂದ ಮೃತದೇಹವನ್ನು ಪುತ್ತೂರಿಗೆ ತಲುಪಿಸಲು ಮೃತರ ಕುಟುಂಬಸ್ಥರು ಹಾಗೂ ಸಂಘ ಕುಟುಂಬದ ನಾಯಕರು ಮತ್ತು ಕಾರ್ಯಕರ್ತರು ಸಹಕರಿಸಿದರು. ಮೃತರು ಪತ್ನಿ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಸೀಸನ್: ಮಕ್ಕಾ ಪ್ರವೇಶದ ಅನುಮತಿ ಪತ್ರ ವಿತರಣೆ ಆರಂಭ
ಗಲ್ಫ್ ವಲಯದಲ್ಲಿ ಶಾಂತಿಯ ಹೊಸ ಪರ್ವ – ಕದನ ವಿರಾಮ ನಿರ್ಧಾರಕ್ಕೆ ಜಿಸಿಸಿ ಪೂರ್ಣ ಬೆಂಬಲ
ಬಹ್ರೇನ್ ವೈಮಾನಿಕ ಮಾರ್ಗ ಮುಕ್ತ- ವಿಮಾನಯಾನ ಪುನಾರಂಭಕ್ಕೆ ಹಸಿರು ನಿಶಾನೆ
ದಾಳಿಯ ಭೀತಿ: ಸೌದಿ-ಬಹ್ರೇನ್ ‘ಕಾಸ್ವೇ’ ಬಂದ್- ಸಂಚಾರ ಸಂಪೂರ್ಣ ಸ್ಥಗಿತ
ಸೌದಿ ಅರೇಬಿಯಾ: ಇನ್ನೂ 69 ಹುದ್ದೆಗಳಲ್ಲಿ ಶೇ.100 ಸ್ವದೇಶೀಕರಣ ಜಾರಿ
ಸೌದಿ: ನಾಳೆಯಿಂದ ಭಾರಿ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಎಚ್ಚರಿಕೆ
ಇರಾನ್ ದಾಳಿ; ವಿಶ್ವದ ಅತಿದೊಡ್ಡ ‘ಎಮಿರೇಟ್ಸ್ ಗ್ಲೋಬಲ್ ಅಲ್ಯೂಮಿನಿಯಂ’ ಕಾರ್ಯಾಚರಣೆ ಸ್ಥಗಿತ
ಹಜ್-ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಪವಿತ್ರ ಮಕ್ಕಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣ
ಚಾಲನೆ ವೇಳೆ ತಿಂಡಿ ಮತ್ತು ಮೇಕಪ್ಗೆ ಬ್ರೇಕ್- ಸೌದಿ ಸಂಚಾರಿ ವಿಭಾಗದ ಕಟ್ಟುನಿಟ್ಟಿನ ಸೂಚನೆ
ಯುದ್ಧದ ಸನ್ನಿವೇಶದಲ್ಲಿ ಸುಲಿಗೆ: ಸೌದಿ ಪ್ರವಾಸಿಗರನ್ನು ಲೂಟಿ ಮಾಡುತ್ತಿರುವ ವಿಮಾನಯಾನ ಸಂಸ್ಥೆಗಳು