ಮಂಗಳೂರು: ಪ್ರಮುಖ ಧಾರ್ಮಿಕ ಕಾರ್ಯಕರ್ತ ಹಾಗೂ ಸಾಮಾಜಿಕ ಮುಂದಾಳುವಾಗಿದ್ದ ಜನಾಬ್ ಬಿ ಎಂ ಮುಮ್ತಾಝ್ ಅಲೀ ಕೃಷ್ಣಾಪುರ ಅವರ ಆಘಾತಕಾರಿ ನಿಧನಕ್ಕೆ ಕರ್ನಾಟಕ ಮುಸ್ಲಿಂ ಜಮಾಅತ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಸದಾ ಕಾಲ ಸಮಾಜಸೇವೆಯಲ್ಲಿ ತೊಡಗಿಸಿ ಕೊಂಡಿದ್ದ ಉತ್ಸಾಹಿ ಯುವ ನಾಯಕ ಮುಮ್ತಾಝ್ ಅಲೀಯವರು ಎಲ್ಲರೊಂದಿಗೂ ನಗುನಗುತ್ತಲೇ ಬೆರೆಯುವ, ಉತ್ತಮ ಕೆಲಸಗಳನ್ನು ಪ್ರೋತ್ಸಾಹಿಸುವ ಸಜ್ಜನ ವ್ಯಕ್ತಿತ್ವವನ್ನು ಹೊಂದಿದ್ದರು. ಅವರು ಯಾವತ್ತೂ ಆತ್ಮಹತ್ಯೆಯಂತಹ ಕೃತ್ಯಕ್ಕೆ ಇಳಿಯುವವರೆಂದು ಊಹಿಸಲೂ ಸಾಧ್ಯವಿಲ್ಲ. ಇದರ ಹಿನ್ನೆಲೆಯಲ್ಲಿ ನಿಗೂಢತೆಗಳು ಎದ್ದು ಕಾಣುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿ ತೀವ್ರ ತನಿಖೆಗೊಳಪಡಿಸಿ ಸತ್ಯವನ್ನು ಹೊರತರಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾತ್ ಆಗ್ರಹಿಸಿದೆ.
ಮುಮ್ತಾಝ್ ಅಲೀಯವರ ನಿಧನವು ವಿಶೇಷತಃ ದ.ಕ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ಬಲು ದೊಡ್ಡ ನಷ್ಟವಾಗಿದೆ. ಅಲ್ಲಾಹನು ಅವರಿಗೆ ಪಾಪಮೋಚನೆ ನೀಡಿ ಪಾರತ್ರಿಕ ವಿಜಯವನ್ನು ಅನುಗ್ರಹಿಸಲಿ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸೆಕ್ರಟರಿಯೇಟ್ ತುರ್ತು ಸಭೆಯಲ್ಲಿ ಪ್ರಾರ್ಥಿಸಿದೆ.
ಮೃತರ ಅಂತ್ಯಕ್ರಿಯೆಯು ಇಂದು ಅಸರ್ ನಮಾಝಿನ ಬಳಿಕ ಕೃಷ್ಣಾಪುರ ಈದ್ದಾ ಮಸೀದಿ ಯಲ್ಲಿ ನೆರವೇರಲಿದ್ದು ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ವಿನಂತಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ