ಮಂಗಳೂರು: ಪ್ರಮುಖ ಧಾರ್ಮಿಕ ಕಾರ್ಯಕರ್ತ ಹಾಗೂ ಸಾಮಾಜಿಕ ಮುಂದಾಳುವಾಗಿದ್ದ ಜನಾಬ್ ಬಿ ಎಂ ಮುಮ್ತಾಝ್ ಅಲೀ ಕೃಷ್ಣಾಪುರ ಅವರ ಆಘಾತಕಾರಿ ನಿಧನಕ್ಕೆ ಕರ್ನಾಟಕ ಮುಸ್ಲಿಂ ಜಮಾಅತ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಸದಾ ಕಾಲ ಸಮಾಜಸೇವೆಯಲ್ಲಿ ತೊಡಗಿಸಿ ಕೊಂಡಿದ್ದ ಉತ್ಸಾಹಿ ಯುವ ನಾಯಕ ಮುಮ್ತಾಝ್ ಅಲೀಯವರು ಎಲ್ಲರೊಂದಿಗೂ ನಗುನಗುತ್ತಲೇ ಬೆರೆಯುವ, ಉತ್ತಮ ಕೆಲಸಗಳನ್ನು ಪ್ರೋತ್ಸಾಹಿಸುವ ಸಜ್ಜನ ವ್ಯಕ್ತಿತ್ವವನ್ನು ಹೊಂದಿದ್ದರು. ಅವರು ಯಾವತ್ತೂ ಆತ್ಮಹತ್ಯೆಯಂತಹ ಕೃತ್ಯಕ್ಕೆ ಇಳಿಯುವವರೆಂದು ಊಹಿಸಲೂ ಸಾಧ್ಯವಿಲ್ಲ. ಇದರ ಹಿನ್ನೆಲೆಯಲ್ಲಿ ನಿಗೂಢತೆಗಳು ಎದ್ದು ಕಾಣುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿ ತೀವ್ರ ತನಿಖೆಗೊಳಪಡಿಸಿ ಸತ್ಯವನ್ನು ಹೊರತರಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾತ್ ಆಗ್ರಹಿಸಿದೆ.
ಮುಮ್ತಾಝ್ ಅಲೀಯವರ ನಿಧನವು ವಿಶೇಷತಃ ದ.ಕ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ಬಲು ದೊಡ್ಡ ನಷ್ಟವಾಗಿದೆ. ಅಲ್ಲಾಹನು ಅವರಿಗೆ ಪಾಪಮೋಚನೆ ನೀಡಿ ಪಾರತ್ರಿಕ ವಿಜಯವನ್ನು ಅನುಗ್ರಹಿಸಲಿ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸೆಕ್ರಟರಿಯೇಟ್ ತುರ್ತು ಸಭೆಯಲ್ಲಿ ಪ್ರಾರ್ಥಿಸಿದೆ.
ಮೃತರ ಅಂತ್ಯಕ್ರಿಯೆಯು ಇಂದು ಅಸರ್ ನಮಾಝಿನ ಬಳಿಕ ಕೃಷ್ಣಾಪುರ ಈದ್ದಾ ಮಸೀದಿ ಯಲ್ಲಿ ನೆರವೇರಲಿದ್ದು ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ವಿನಂತಿಸಿದೆ.
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ