janadhvani

Kannada Online News Paper

ಮುಮ್ತಾಝ್ ಅಲೀ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟ- ಕರ್ನಾಟಕ ಮುಸ್ಲಿಂ ಜಮಾಅತ್ ದ. ಕ‌ ಈಸ್ಟ್ ಜಿಲ್ಲೆ

ಪುತ್ತೂರು : ಇಂದು ನಮ್ಮನ್ನಗಲಿದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಔದ್ಯಮಿಕ ಮೇರು ವ್ಯಕ್ತಿ ಬಿ. ಎಂ. ಮುಂತಾಝ್ ಆಲಿಯವರ ಅಗಲುವಿಕೆಯು ಸಮಾಜಕ್ಕೆ ಹಾಗೂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.

ಹಲವಾರು ವಿದ್ಯಾ ಸಂಸ್ಥೆ ಹಾಗೂ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಅಜರಾಮರ ವ್ಯಕ್ತಿಯಾಗಿದ್ದರು. ಎಲ್ಲಾ ವಿಭಾಗದಲ್ಲಿ ಅವರ ಪಾತ್ರ ಅತ್ಯಂತ ಪ್ರಾಮುಖ್ಯತೆ ಪಡೆದಿತ್ತು. ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ವೆಸ್ಟ್ ಜಿಲ್ಲಾಧ್ಯಕ್ಷರಾಗಿ, ಹಲವು ಶೈಕ್ಷಣಿಕ, ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿದ್ದರು. ಅವರು ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆಗೆ ಒತ್ತುಕೊಡುತ್ತಿದ್ದರು. ಅವರ ಮರಣದಲ್ಲಿ ಕೆಲವೊಂದು ಊಹಾಪೋಹಗಳಿದ್ದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು.

ಮೃತರ ಪಾರತ್ರಿಕ ಮೋಕ್ಷಕ್ಕಾಗಿ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವ್ಯಾಪ್ತಿಯ ಯುನಿಟ್, ಸರ್ಕಲ್, ಝೋನ್ ಗಳಲ್ಲಿ ಪ್ರತ್ಯೇಕ ಪ್ರಾರ್ಥನೆ ನಡೆಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

ವರದಿ :🖊️ ಯೂಸುಫ್ ಸಯೀದ್ ಪುತ್ತೂರು* (ಮಾಧ್ಯಮ ಕಾರ್ಯದರ್ಶಿ)

error: Content is protected !! Not allowed copy content from janadhvani.com