ಸೌದಿ ಅರೇಬಿಯಾ: ಉಮ್ರಾ ನಿರ್ವಹಸಲು ಕುಟುಂಬದೊಂದಿಗೆ ಊರಿನಿಂದ ಮಕ್ಕ ಮದೀನಾ ಯಾತ್ರೆ ಮುಗಿಸಿ ಕುಟುಂಬದವರು ಊರಿಗೆ ತಲುಪಿದ್ದರೂ ಉಸ್ತಾದರು ಮಾತ್ರ ಸ್ನೇಹಿತರನ್ನು ಹಾಗು ಇತರ ಸಹಪಾಠಿಗಳನ್ನು ಕಾಣಲು ದಮ್ಮಾಮ್ ಕಡೆ ಬಂದಿದ್ದರು, ಊರಿಗೆ ಹೊರಡಲು ತಯಾರಿಯಲ್ಲಿದ್ದ ಅಬ್ದುಲ್ಲಾ ಮದನಿ ಉಸ್ತಾದರು ಅನಾರೋಗ್ಯದಿಂದ ದಮ್ಮಾಮ್ ನಲ್ಲಿ ಸ್ನೇಹಿತನ ಕೊಠಡಿಯಲ್ಲಿ ನಿಧನರಾಗಿದ್ದರು.
ಮರಣೋತ್ತರ ಕ್ರೀಯೆಗೆ ಬೇಕದ ವ್ಯವಸ್ಥೆ ಕಲ್ಪಿಸಲು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ಕೂಡಲೇ ಸ್ಪಂದಿಸಿ ದಾಖಲೆ ಪತ್ರ ಹಾಗೂ ಭಾರತೀಯ ರಾಯಬಾರಿ ಕಛೇರಿ ಹಾಗು ಇನ್ನಿತರ ವ್ಯವಸ್ಥೆಗಳನ್ನು ಸರಿಪಡಿಸಿ ಅಕ್ಟೋಬರ್ 15 ರಂದು ದಮ್ಮಾಮ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಮೃತರು.ತಾಯಿ ಹೆಂಡತಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ಈ ಕಾರ್ಯದಲ್ಲಿ ಸಹಕರಿಸಿದ ಕೆ.ಸಿ.ಎಫ್ ದಮ್ಮಾಮ್ ಝೋನ್ ಸಾಂತ್ವನ ತಂಡದ ನಾಯಕರಾದ ಬಾಷಾ ಗಂಗಾವಳಿ, ನಾರ್ತ್ ಸೆಕ್ಟರ್ ನಾಯಕರಾದ ಅಶ್ರಫ್ ಕುತ್ತಾರು, ಅಝೀಝ್ ಮುಸ್ಲಿಯಾರ್ ಕುತ್ತಾರು, ಹಬೀಬ್ ಸಖಾಫಿ ಹಾಗು ಇನ್ನಿತರ ಸಂಘ ಕುಟುಂಬದ ನಾಯಕರ (ICF, ಸಅದಿಯಾ) ಸಹಕಾರದಿಂದ ದಫನ ಕಾರ್ಯ ನೆರೆವೇರಿಸಲಾಯಿತು.ದಮ್ಮಾಮ್ 91 ನಲ್ಲಿ ಅಂತ್ಯಕ್ರೀಯೆ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಕೆ.ಸಿ.ಎಫ್ ಹಾಗು ಸಅದಿಯಾದ ಹಿರಿಯ ನಾಯಕರಾದ ಯೂಸುಫ್ ಸಅದಿ ಅಯ್ಯಂಗೇರಿ, ಕೆ.ಸಿ.ಎಫ್ ದಾಅಿ PC ಅಬೂಬಕರ್ ಸಅದಿ ಹಾಗು ಇನ್ನಿತರ ಹಲವಾರು ಸಂಘ ಕುಟುಂಬದ ನಾಯಕರು ಬಾಗಿಯಾಗಿ ಮೃತರಿಗಾಗಿ ದುಆ ನೆರೆವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ