ಗುವಾಹಟಿ: ಸಂಸತ್ ಭವನ ಇರುವ ಭೂಮಿ ಮತ್ತು ರಾಷ್ಟ್ರ ರಾಜಧಾನಿಯ ಸುತ್ತಲಿನ ಪ್ರದೇಶಗಳು ವಕ್ಫ್ ಆಸ್ತಿಗಳಾಗಿವೆ ಎಂದು ಎಐಯುಡಿಎಫ್(All India United Democratic Front) ಅಧ್ಯಕ್ಷ ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಅಜ್ಮಲ್ ಈ ಪ್ರತಿಕ್ರಿಯೆ ನೀಡಿದ್ದಾರೆ. ರಾಷ್ಟ್ರ ರಾಜಧಾನಿಯ ವಸಂತ ವಿಹಾರ್ನಿಂದ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶವು ವಕ್ಫ್ ಆಸ್ತಿಯಾಗಿದೆ ಎಂದು ಅವರು ಪ್ರತಿಪಾದಿಸಿದರು. ಎಲ್ಲಾ ಸಂಸದರು ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಬೇಕು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಸಲಹೆಯ ನಂತರ ಬದ್ರುದ್ದೀನ್ ಅವರ ಪ್ರತಿಕ್ರಿಯೆ ಬಂದಿದೆ.
‘‘ವಕ್ಫ್ ಆಸ್ತಿಗಳ ಪಟ್ಟಿ ಹೊರಬಿದ್ದಿದೆ – ಸಂಸತ್ ಭವನ, ಸುತ್ತಮುತ್ತಲಿನ ಪ್ರದೇಶಗಳು, ವಸಂತ ವಿಹಾರದಿಂದ ವಿಮಾನ ನಿಲ್ದಾಣದ ವರೆಗಿನ ಪ್ರದೇಶಗಳನ್ನು ವಕ್ಫ್ ಆಸ್ತಿಯೊಂದಿಗೆ ನಿರ್ಮಿಸಲಾಗಿದೆ. ವಿಮಾನ ನಿಲ್ದಾಣವನ್ನೂ ವಕ್ಫ್ ಆಸ್ತಿಯನ್ನು ಬಳಸಿ ನಿರ್ಮಿಸಲಾಗಿದೆ ಎಂದೂ ಜನರು ಹೇಳುತ್ತಿದ್ದಾರೆ’ ಎಂದು ಬದ್ರುದ್ದೀನ್ ಅಜ್ಮಲ್ ಹೇಳಿದರು.
ವಕ್ಫ್ ಭೂಮಿಯನ್ನು ಅನುಮತಿಯಿಲ್ಲದೆ ಬಳಸುವುದು ಹೇಯ ಕೃತ್ಯ . ವಕ್ಫ್ ತಿದ್ದುಪಡಿ ವಿಧೇಯಕದ ಮೇಲೆ ಸರ್ಕಾರ ಬೀಳಲಿದೆ ಎಂದು ಅವರು ಹೇಳಿದರು. ಏತನ್ಮಧ್ಯೆ, ವಕ್ಫ್ ತಿದ್ದುಪಡಿ ಮಸೂದೆ 2024 ರ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ವಿರೋಧ ಪಕ್ಷದ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಅಕ್ಟೋಬರ್ 14 ರಂದು ಹೊಸದಿಲ್ಲಿಯಲ್ಲಿ ನಡೆದ ಸಮಿತಿ ಸಭೆಯಲ್ಲಿ ಸಮಿತಿಯ ಅಧ್ಯಕ್ಷೆ ಜಗದಾಂಬಿಕಾ ಪಾಲಿನ್ ಪಕ್ಷಪಾತದಿಂದ ವರ್ತಿಸಿದರು ಎಂದು ಪ್ರತಿಪಕ್ಷವು ಆರೋಪಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ