ಮಂಗಳೂರು: ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ವೆಸ್ಟ್ ಜಿಲ್ಲೆಯ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಉಪಾಧ್ಯಕ್ಷರಾಗಿದ್ದ ಹಿರಿಯ ನಾಯಕ ಅಲಿಕುಂಞಿ ಹಾಜಿ ಪಾರೆಯವರನ್ನು ಇತ್ತೀಚೆಗೆ ಮಂಗಳೂರು ಪಡೀಲ್ ನಲ್ಲಿರುವ ಇಲ್ಮ್ ಸೆಂಟರ್ ನಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಹಲವಾರು ವರ್ಷಗಳಿಂದ ವಿವಿಧ ಸುನ್ನೀ ಸಂಘ ಸಂಸ್ಥೆಗಳಲ್ಲಿ ಅಲಿಕುಂಞಿ ಹಾಜಿ ಯವರು ಸಕ್ರಿಯರಾಗಿದ್ದಾರೆ.
ಜಿಲ್ಲಾ ಉಪಾಧ್ಯಕ್ಷ ಎಂ ಪಿ ಎಂ ಅಶ್ರಫ್ ಸಅದಿ ಮಲ್ಲೂರುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕೆಕೆಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ಸುರಿಬೈಲು ಉದ್ಘಾಟಿಸಿದರು.
ಇತ್ತೀಚೆಗೆ ಅಗಲಿದ ಸಾಮಾಜಿಕ, ಧಾರ್ಮಿಕ ಮುಂದಾಳು ಹಾಜಿ ಮುಮ್ತಾಜ್ ಅಲಿಯವರಿಗಾಗಿ ಪ್ರಾರ್ಥಿಸಲಾಯಿತು. ಸಭೆಯಲ್ಲಿ ಜಿಲ್ಲಾ ಕೋಶಾಧಿಕಾರಿ ಎಸ್ ಕೆ ಅಬ್ದುಲ್ ಖಾದರ್ ಹಾಜಿ ಮುಡಿಪು,ಕಾರ್ಯದರ್ಶಿಗಳಾದ ಬಶೀರ್ ಹಾಜಿ ಕುಂಬ್ರ, ಇಸ್ಮಾಯಿಲ್ ಕಿನ್ಯ, ಬಿ ಎ ಇಖ್ಬಾಲ್ ಕೃಷ್ಣಾಪುರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಅನ್ವರ್ ಹಾಜಿ ಗೂಡಿನಬಳಿ,ಎ ಎಂ ಇಸ್ಮಾಯಿಲ್ ಸಅದಿ ಉರುಮನೆ, ಬದ್ರುದ್ದೀನ್ ಹಾಜಿ ಬಜ್ಪೆ, ಸಾಮನಿಗೆ ಮದನಿ, ಸಿದ್ದೀಖ್ ಸಖಾಫಿ ಸಹಿತ ಜಿಲ್ಲಾ ನಾಯಕರು ಭಾಗವಹಿಸಿದ್ದರು.
ನವೆಂಬರ್ 02 ಶನಿವಾರ ಬೆಳಿಗ್ಗೆ 09:30 ಘಂಟೆಗೆ ಮಸ್ಜಿದುತ್ತಖ್ವಾ ಪಂಪ್ ವೆಲ್ ನಲ್ಲಿ ನಮ್ಮನ್ನಗಲಿದ ಹಾಜಿ ಬಿ ಎಂ ಮುಮ್ತಾಜ್ ಅಲಿಯವರಿಗಾಗಿ ಪ್ರತ್ಯೇಕ ದುಆಃ ಮಜ್ಲಿಸ್ ನಡೆಸಲು ತೀರ್ಮಾನಿಸಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಮ್ ಸಅದಿ ಖತರ್ ಸ್ವಾಗತಿಸಿ ಕಾರ್ಯದರ್ಶಿ ಅಬ್ದುಲ್ ಜಲೀಲ್ ಬ್ರೈಟ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ