ಮಂಗಳೂರು: ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ವೆಸ್ಟ್ ಜಿಲ್ಲೆಯ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಉಪಾಧ್ಯಕ್ಷರಾಗಿದ್ದ ಹಿರಿಯ ನಾಯಕ ಅಲಿಕುಂಞಿ ಹಾಜಿ ಪಾರೆಯವರನ್ನು ಇತ್ತೀಚೆಗೆ ಮಂಗಳೂರು ಪಡೀಲ್ ನಲ್ಲಿರುವ ಇಲ್ಮ್ ಸೆಂಟರ್ ನಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಹಲವಾರು ವರ್ಷಗಳಿಂದ ವಿವಿಧ ಸುನ್ನೀ ಸಂಘ ಸಂಸ್ಥೆಗಳಲ್ಲಿ ಅಲಿಕುಂಞಿ ಹಾಜಿ ಯವರು ಸಕ್ರಿಯರಾಗಿದ್ದಾರೆ.
ಜಿಲ್ಲಾ ಉಪಾಧ್ಯಕ್ಷ ಎಂ ಪಿ ಎಂ ಅಶ್ರಫ್ ಸಅದಿ ಮಲ್ಲೂರುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕೆಕೆಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ಸುರಿಬೈಲು ಉದ್ಘಾಟಿಸಿದರು.
ಇತ್ತೀಚೆಗೆ ಅಗಲಿದ ಸಾಮಾಜಿಕ, ಧಾರ್ಮಿಕ ಮುಂದಾಳು ಹಾಜಿ ಮುಮ್ತಾಜ್ ಅಲಿಯವರಿಗಾಗಿ ಪ್ರಾರ್ಥಿಸಲಾಯಿತು. ಸಭೆಯಲ್ಲಿ ಜಿಲ್ಲಾ ಕೋಶಾಧಿಕಾರಿ ಎಸ್ ಕೆ ಅಬ್ದುಲ್ ಖಾದರ್ ಹಾಜಿ ಮುಡಿಪು,ಕಾರ್ಯದರ್ಶಿಗಳಾದ ಬಶೀರ್ ಹಾಜಿ ಕುಂಬ್ರ, ಇಸ್ಮಾಯಿಲ್ ಕಿನ್ಯ, ಬಿ ಎ ಇಖ್ಬಾಲ್ ಕೃಷ್ಣಾಪುರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಅನ್ವರ್ ಹಾಜಿ ಗೂಡಿನಬಳಿ,ಎ ಎಂ ಇಸ್ಮಾಯಿಲ್ ಸಅದಿ ಉರುಮನೆ, ಬದ್ರುದ್ದೀನ್ ಹಾಜಿ ಬಜ್ಪೆ, ಸಾಮನಿಗೆ ಮದನಿ, ಸಿದ್ದೀಖ್ ಸಖಾಫಿ ಸಹಿತ ಜಿಲ್ಲಾ ನಾಯಕರು ಭಾಗವಹಿಸಿದ್ದರು.
ನವೆಂಬರ್ 02 ಶನಿವಾರ ಬೆಳಿಗ್ಗೆ 09:30 ಘಂಟೆಗೆ ಮಸ್ಜಿದುತ್ತಖ್ವಾ ಪಂಪ್ ವೆಲ್ ನಲ್ಲಿ ನಮ್ಮನ್ನಗಲಿದ ಹಾಜಿ ಬಿ ಎಂ ಮುಮ್ತಾಜ್ ಅಲಿಯವರಿಗಾಗಿ ಪ್ರತ್ಯೇಕ ದುಆಃ ಮಜ್ಲಿಸ್ ನಡೆಸಲು ತೀರ್ಮಾನಿಸಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಮ್ ಸಅದಿ ಖತರ್ ಸ್ವಾಗತಿಸಿ ಕಾರ್ಯದರ್ಶಿ ಅಬ್ದುಲ್ ಜಲೀಲ್ ಬ್ರೈಟ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?