ನವದೆಹಲಿ | ಆರೋಪಿಗಳು ತಪ್ಪಿತಸ್ಥರೋ ಅಲ್ಲವೋ ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯವೇ ಹೊರತು ಆಡಳಿತಗಾರರಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆರೋಪಗಳ ಆಧಾರದ ಮೇಲೆ ಒಬ್ಬರ ನಿವಾಸವನ್ನು ಹೇಗೆ ಒಡೆಯಬಹುದು? ಸರ್ಕಾರೀ ಆಡಳಿತಗಾರರು ಆರೋಪಿಗಳಿಗೆ ಶಿಕ್ಷೆ ವಿಧಿಸುವ ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಹೇಳಿದೆ. ಬುಲ್ಡೋಜರ್ ರಾಜ್ ವಿರುದ್ಧದ ಅರ್ಜಿಗಳಲ್ಲಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ಒಬ್ಬ ವ್ಯಕ್ತಿಯನ್ನು ಅಪರಾಧಿ ಎಂದು ಸರ್ಕಾರಿ ವ್ಯವಸ್ಥೆ ಹೇಗೆ ಹೇಳುತ್ತದೆ ಎಂದು ಸುಪ್ರೀಂ ಕೋರ್ಟ್ ಕೇಳಿದೆ. ಆರೋಪಿಗಳ ಮನೆಗಳನ್ನು ನೆಲಸಮ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ವ್ಯಕ್ತಿ ತಪ್ಪಿತಸ್ಥನೋ ಅಲ್ಲವೋ ಎಂದು ಸರ್ಕಾರ ಹೇಳಲು ಸಾಧ್ಯವಿಲ್ಲ. ಹಾಗೆ ಸೂಚಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದ ಕೆಲಸವನ್ನು ಸರಕಾರ ಕೈಗೆತ್ತಿಕೊಳ್ಳಬಾರದು.
ಕೇವಲ ಪ್ರಕರಣದಲ್ಲಿ ಆರೋಪಿಯಾದ ಮಾತ್ರಕ್ಕೆ ಒಬ್ಬ ಅಪರಾಧಿಯಾಗುವುದಿಲ್ಲ. ಅವನು ತಪ್ಪಿತಸ್ಥನೇ ಆದರೂ, ತನ್ನ ಆಸ್ತಿಯ ಹಕ್ಕನ್ನು ಕಳೆದುಕೊಳ್ಳುವುದಿಲ್ಲ. ಆರೋಪಿ ಎಂಬ ಕಾರಣಕ್ಕೆ ಮನೆಯನ್ನು ಕೆಡವಿರುವುದು ಕಾನೂನು ಬಾಹಿರ. ವಸತಿ ಮೂಲಭೂತ ಹಕ್ಕಾಗಿದೆ.’ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಪ್ರಕರಣಗಳಲ್ಲಿ ಭಾಗಿಯಾದವರ ಮನೆಗಳನ್ನು ಕೆಡವುವಂತಿಲ್ಲ. ನಿರ್ಗತಿಕ ಮಹಿಳೆಯರು ಮತ್ತು ಮಕ್ಕಳನ್ನು ಬೀದಿಗೆ ಎಳೆಯುವಂತಿಲ್ಲ. ಅದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತದೆ.
ಅದೇ ಸಮಯದಲ್ಲಿ, ವ್ಯಕ್ತಿಗಳ ಅಕ್ರಮ ಕಟ್ಟಡಗಳನ್ನು ಕಾನೂನುಬದ್ಧವಾಗಿ ನೆಲಸಮಗೊಳಿಸುವ ಹಕ್ಕು ಸರ್ಕಾರಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಹೀಗಾಗಿ ಕೆಡವುವಾಗ ಕಾನೂನು ಕ್ರಮಗಳನ್ನು ಅನುಸರಿಸಬೇಕು. ಹಕ್ಕು ಉಲ್ಲಂಘನೆಯಾದಲ್ಲಿ ನಷ್ಟ ಪರಿಹಾರಕ್ಕೆ ಅರ್ಹವಾಗಿರುತ್ತದೆ.
ಮುಂಚಿತವಾಗಿ ಸೂಚನೆ ಇಲ್ಲದೆ ಮನೆಗಳನ್ನು ಕೆಡವಬೇಡಿ. ಕನಿಷ್ಠ 15 ದಿನಗಳ ಮುಂಚಿತವಾಗಿ ಸೂಚನೆ ನೀಡಬೇಕು. ಕೆಡವುವ ಪ್ರಕ್ರಿಯೆಯನ್ನು ಚಿತ್ರೀಕರಿಸುವಂತೆಯೂ ನ್ಯಾಯಾಲಯ ಸೂಚಿಸಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ