ಸುರತ್ಕಲ್: ಎಂಆರ್ಪಿಎಲ್ – ಕಾನ ರಸ್ತೆಯ ಸುರತ್ಕಲ್ ರೈಲ್ವೇ ಮೇಲ್ಸೇತುವೆ ಕಾಮಗಾರಿ ನಡೆಯಲಿರುವುದರಿಂದ ಡಿ.11ರಿಂದ ಫೆ.8ರ ವರೆಗೆ ತಾತ್ಕಾಲಿಕ ರಸ್ತೆ ಸಂಚಾರ ಬದಲಾಯಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ.
ಕೃಷ್ಣಾಪುರ, ಕಾಟಿಪಳ್ಳ ಎಂಆರ್ ಪಿಎಲ್ ಮತ್ತು ಕಾನ ಕಡೆ ಸಂಚರಿಸುವ ಲಘು ವಾಹನಗಳು ಸೂರಜ್ ಇಂಟರ್ ನ್ಯಾಶನಲ್ ಹೋಟೇಲ್ ಬಳಿಯಿಂದ ಬಂಟರ ಭವನ ರಸ್ತೆಯಾಗಿ ಸಂಪರ್ಕಿಸಿ ಅಲ್ಲಿಂದ ಮುಂದುವರಿಯುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಆದರೆ ,ಅತ್ಯಂತ ಕಿರಿದಾದ ಈ ಅಗರ್ಮೈಲ್ ರಸ್ತೆಯಲ್ಲಿ ದ್ವಿಮುಖ ವಾಹನ ಸಂಚಾರ ಸಾಧ್ಯವಲ್ಲದ ಕಾರಣ ವಾಹನ ಚಾಲಕರು ಪರಸ್ಪರ ಕಚ್ಚಾಡುವಂತಹಾ ಪರಿಸ್ಥಿತಿ ತಲೆದೋರಿದೆ. ಈ ನಿಟ್ಟಿನಲ್ಲಿ ಇಲ್ಲಿನ ವಾಹನಗಳ ನಿಯಂತ್ರಣಕ್ಕಾಗಿ ಟ್ರಾಫಿಕ್ ಪೋಲೀಸರನ್ನು ನೇಮಕ ಮಾಡುವುದು ಅತೀ ಅಗತ್ಯವಾಗಿದೆ.
ಇಲ್ಲದಿದ್ದರೆ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಕೆಲಸಗಾರರು, ರೋಗಿಗಳು ನಡು ರಸ್ತೆಯಲ್ಲಿ ತಾಸುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಉಂಟಾಗಲಿದೆ. ಹೆಚ್ಚಾಗಿ ದ್ವಿಚಕ್ರವಾಹನಗಳಲ್ಲಿ ಕೆಲಸಕ್ಕೆ ತೆರಳುವ ಮಹಿಳೆಯರು ಸಂಕಷ್ಟಕ್ಕೀಡಾಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ