ಪುತ್ತೂರು: ಕರ್ನಾಟಕ ರಾಜ್ಯ ಎಸ್ ವೈಎಸ್ ಪುತ್ತೂರು ಝೋನ್ ಸಮಿತಿ ಹಾಗೂ ಝೋನ್ ವ್ಯಾಪ್ತಿಯ ಪುತ್ತೂರು, ಕಬಕ, ಮಾಣಿ, ರೆಂಜ, ಕುಂಬ್ರ, ಮಾಡಾವು, ಈಶ್ವರಮಂಗಲ, ಎಂಬ ಏಳು ಸರ್ಕಲ್ ನ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿ, ಸಾಂತ್ವನ ಕಾರ್ಯದರ್ಶಿ, ಇಸಾಬಾ ಕಾರ್ಯದರ್ಶಿ ಗಳನ್ನೊಳಗೊಂಡ ಟೋಪ್ಸ್ ಸಂಗಮವು ಝೋನ್ ಅಧ್ಯಕ್ಷ ಅಬೂ ಶಝ ಅಬ್ದುಲ್ ರಝಾಕ್ ಅಲ್ ಖಾಸಿಮಿ ಕೂರ್ನಡ್ಕ ರವರ ಅಧ್ಯಕ್ಷತೆಯಲ್ಲಿ ಪ್ರೆಸ್ಟೀಜ್ ಪೆವಿಲಿಯನ್ ಹಾಲ್ ನಲ್ಲಿ ನಡೆಯಿತು.
ಎಸ್ ವೈಎಸ್ ಈಸ್ಟ್ ಜಿಲ್ಲಾ ಅಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಲ ರವರು ಪ್ರಸ್ತುತ ಸಂಗಮವನ್ನು ಉದ್ಘಾಟಿಸಿ ಮಾತನಾಡಿದರು. ಈಸ್ಟ್ ಜಿಲ್ಲಾ ಇಸಾಬಾ ಕಾರ್ಯದರ್ಶಿ ಉಸ್ಮಾನ್ ಸೋಕಿಲ ರವರು ಇಸಾಬಾ ಕ್ಯಾಂಪ್ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪ್ರ. ಕಾರ್ಯದರ್ಶಿ ಸ್ವಾಲಿಹ್ ಮುರ , ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಮೀದ್ ಕೊಯಿಲ ರವರು ಸಾಂದರ್ಭಿಕವಾಗಿ ಮಾತನಾಡಿದರು.
ಝೋನ್ ಕಾರ್ಯದರ್ಶಿ ಅಬ್ದುಲ್ ಜಲೀಲ್ ಸಖಾಫಿ ರವರ ನಾಯಕತ್ವದಲ್ಲಿ ಸರ್ಕಲ್ ಪಿಟಿಸಿ ಕ್ಯಾಂಪ್ ಬಗ್ಗೆ ಅವಲೋಕನ ನಡೆಸಲಾಯಿತು. ಪುತ್ತೂರು ಝೋನ್ ಜಂಇಯತುಲ್ ಉಲಮಾ ಪ್ರ. ಕಾರ್ಯದರ್ಶಿ ಯಾಗಿ ಆಯ್ಕೆಗೊಂಡ ಅಬ್ದುಲ್ ಅಝೀಝ್ ಮಿಸ್ಬಾಹಿ ರವರನ್ನು ಝೋನ್ ಎಸ್ ವೈಎಸ್ ವತಿಯಿಂದ ಶಾಲುಹೊದಿಸಿ ಸನ್ಮಾನಿಸಲಾಯಿತು.
ನಮ್ಮನ್ನಗಲಿದ ಸಿದ್ದೀಕ್ ಹಾಜಿ ಕಬಕ ರವರ ತಂದೆಯವರ ಹೆಸರಿನಲ್ಲಿ ತಹ್ಲೀಲ್ ಸಮರ್ಪಣೆ ಮಾಡಿ ಪ್ರಾರ್ಥಿಸಲಾಯಿತು.
ಸಂಗಮದಲ್ಲಿ ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಅಝೀಝ್ ಚೆನ್ನಾರ್, ಝೋನ್ ಕೋಶಾಧಿಕಾರಿ ಅಬೂಬಕರ್ ನರಿಮೊಗರು, ನೌಷಾದ್ ಸಅದಿ ಗಟ್ಟಮನೆ, ಶಮೀರ್ ಸಖಾಫಿ ರೆಂಜಲಾಡಿ, ಝೋನ್ ಇಸಾಬಾ ಕಾರ್ಯದರ್ಶಿ ರಝಾಕ್ ಹಿಮಮಿ ರೆಂಜ, ಝೋನ್ ದಅವಾ ಕಾರ್ಯದರ್ಶಿ ಹೈದರ್ ಸಖಾಫಿ ಬುಡೋಳಿ, ಅಬ್ದುಲ್ಲ ಕಾವು, ಸಾಂತ್ವನ ಕಾರ್ಯದರ್ಶಿ ಫವಾಝ್ ಕಟ್ಟತ್ತಾರು, ಮುನೀರ್ ಹನೀಫಿ ಅರಿಕ್ಕಿಲ, ಇರ್ಫಾನ್ ಹಿಮಮಿ, ಖಾಸಿಮ್ ಪೇರಲ್ತಡ್ಕ, ಕೆಪಿ ಉಮರ್ ನರಿಮೊಗರು , ಶಾಹುಲ್ ಹಮೀದ್ ಕಬಕ, ಶಮೀರ್ ಕೊಡಿಪ್ಪಾಡಿ, ಜಲೀಲ್ ಮುಸ್ಲಿಯಾರ್ ಕೋಡಾಜೆ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯದರ್ಶಿ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?