ಉಜ್ಜೈನ್: ರಾಮಮಂದಿರದಲ್ಲಿ ಪ್ರಧಾನಿ ಮೋದಿ ಮೂರ್ತಿ ಪ್ರತಿಷ್ಠಾಪನೆ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಕಾರ್ಯಕ್ರಮದಿಂದ ದೂರ ಉಳಿದಿದ್ದ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಈಗ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ, ಭಾರತದಲ್ಲಿ ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ, ಈ ವೇಳೆಗೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೈಲಿನಲ್ಲಿರುತ್ತಿದ್ದರು ಎಂದು ಹೇಳಿದ್ದಾರೆ.
ಇದೇ ವೇಳೆ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ಎಂದು ಪುರಿ ಶಂಕರಾಚಾರ್ಯ ಹೇಳಿದ್ದಾರೆ. 2014 ರಲ್ಲಿ ಮೋದಿ ಪ್ರಧಾನಿಯಾಗುವುದಕ್ಕೂ ಮೊದಲು ಪುರಿಗೆ ತೆರಳಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಅವರ ಆಶೀರ್ವಾದ ಪಡೆದಿದ್ದರು.
ಈ ಕುರಿತು ಹರೀಶ್ ತಿವಾರಿ ಎಂಬವರು ಎಕ್ಸ್ ನಲ್ಲಿ ಮಾಡಿದ್ದ ಪೋಸ್ಟ್ ನ್ನು ಹಂಚಿಕೊಂಡ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ‘ನಿರ್ಭೀತ ಜಗದ್ಗುರು ‘ಎಂದು ಕರೆದಿದ್ದಾರೆ. ಸುಬ್ರಮಣಿಯನ್ ಸ್ವಾಮಿ ಈ ಹಿಂದೆ ಹಲವು ಬಾರಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ನವೆಂಬರ್ ನಲ್ಲಿ ಮೋದಿಯನ್ನು ‘ಸುಳ್ಳುಗಾರ’ ಎಂದು ಕರೆದಿದ್ದ ಸ್ವಾಮಿ, 2014ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಪಡುವುದಾಗಿ ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್