ಉಜ್ಜೈನ್: ರಾಮಮಂದಿರದಲ್ಲಿ ಪ್ರಧಾನಿ ಮೋದಿ ಮೂರ್ತಿ ಪ್ರತಿಷ್ಠಾಪನೆ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಕಾರ್ಯಕ್ರಮದಿಂದ ದೂರ ಉಳಿದಿದ್ದ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಈಗ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ, ಭಾರತದಲ್ಲಿ ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ, ಈ ವೇಳೆಗೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೈಲಿನಲ್ಲಿರುತ್ತಿದ್ದರು ಎಂದು ಹೇಳಿದ್ದಾರೆ.
ಇದೇ ವೇಳೆ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ಎಂದು ಪುರಿ ಶಂಕರಾಚಾರ್ಯ ಹೇಳಿದ್ದಾರೆ. 2014 ರಲ್ಲಿ ಮೋದಿ ಪ್ರಧಾನಿಯಾಗುವುದಕ್ಕೂ ಮೊದಲು ಪುರಿಗೆ ತೆರಳಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಅವರ ಆಶೀರ್ವಾದ ಪಡೆದಿದ್ದರು.
ಈ ಕುರಿತು ಹರೀಶ್ ತಿವಾರಿ ಎಂಬವರು ಎಕ್ಸ್ ನಲ್ಲಿ ಮಾಡಿದ್ದ ಪೋಸ್ಟ್ ನ್ನು ಹಂಚಿಕೊಂಡ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ‘ನಿರ್ಭೀತ ಜಗದ್ಗುರು ‘ಎಂದು ಕರೆದಿದ್ದಾರೆ. ಸುಬ್ರಮಣಿಯನ್ ಸ್ವಾಮಿ ಈ ಹಿಂದೆ ಹಲವು ಬಾರಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ನವೆಂಬರ್ ನಲ್ಲಿ ಮೋದಿಯನ್ನು ‘ಸುಳ್ಳುಗಾರ’ ಎಂದು ಕರೆದಿದ್ದ ಸ್ವಾಮಿ, 2014ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಪಡುವುದಾಗಿ ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಸಾದು ಹಾಜಿ: ಸಾಗ್ ಕುಟುಂಬದ ಪರಂಪರೆಯ ದಾರಿದೀಪ
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ