ಯಶಸ್ವಿ 91 ವರ್ಷವನ್ನು ಪೂರ್ತಿಗೊಳಿಸಿದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾದಕಟ್ಟೆ ವತಿಯಿಂದ ದಿನಾಂಕ 14-12-2024 ರಂದು ನಡೆದ ಸಾರ್ವಜನಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅತ್ಯುತ್ತಮ ಸಂಘಟನೆ ಪ್ರಶಸ್ತಿ ಯನ್ನು ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ಗೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸನ್ಮಾನ್ಯ ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಂ ಎಸ್ ಮುಹಮ್ಮದ್, ಹೈಕೋರ್ಟ್ ನ ಖ್ಯಾತ ನ್ಯಾಯವಾದಿ ಅರುಣ್ ಶಾಂ, ಕ್ಯಾನ್ಸರ್ ರೋಗ ತಜ್ಞರಾದ ಡಾ.ಅಜಯ್, ಡಾ.ಸಂಗೀತಾ, ಡಾ. ಸುಜಯ್, ಗಲ್ಫ್ ಉದ್ಯಮಿ ಹಮೀದ್ ಕುಲ್ಯಾರು, ಎಸ್ ಎಂ ಎ ರಾಜ್ಯ ಕೋಶಾಧಿಕಾರಿ ಹಮೀದ್ ಹಾಜಿ ಕೊಡುಂಗಾಯಿ, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಹನೀಫ್ ಹಾಜಿ ಗೋಳ್ತಮಜಲು, ಕಾರ್ಯದರ್ಶಿ ನ್ಯಾಯವಾದಿ ಅಬೂಬಕ್ಕರ್ ವಿಟ್ಲ, ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಮೋನಾಕ, ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರಝಾಕ್ ಕುಕ್ಕಾಜೆ, ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹಾಜಬ್ಬ ಹರೇಕಳ, ಐಬಿ ಬಶೀರ್ ಪೈಚಾರ್, ಹೈದರ್ ಪರ್ತಿಪ್ಪಾಡಿ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದೀಪ್ ಶೆಟ್ಟಿ ಮಾಣಿ, ಸ್ನೇಹ ಮಿಲನ ಅಧ್ಯಕ್ಷರಾದ ನಾರಾಯಣ ಶೆಟ್ಟಿ ಕುಲ್ಯಾರು, ಎಸ್ ಎಂ ಎ ಬಂಟ್ವಾಳ ಝೋನ್ ಮಾಜಿ ಅಧ್ಯಕ್ಷರಾದ ಸಿ ಎಚ್ ಅಬೂಬಕ್ಕರ್, ಯೂಸುಫ್ ತಾಳಿತ್ತನೂಜಿ, ಮಾದಕಟ್ಟೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹಂಝ ಬಾರೆಬೆಟ್ಟು, ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ರಫ್ ಸಾಲೆತ್ತೂರು, ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಸಿ ಎಚ್ ರಝಾಕ್, ರಾಜೇಶ್ ಗೌಡ ಹಾಗೂ ಇನ್ನಿತರ ಗಣ್ಯರ ಸಮ್ಮುಖದಲ್ಲಿ ಸಮಾಜ ಸೇವೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡ ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ಸಂಸ್ಥೆಗೆ ಅತ್ಯುತ್ತಮ ಸಂಘಟನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನೌಫಲ್ ಕೆಬಿಎಸ್ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್