ಕರಾಚಿ, ಪಾಕಿಸ್ತಾನ: ದೆಹಲಿಯಿಂದ ಸೌದಿ ಅರೇಬಿಯಾದ ಜಿದ್ದಾಗೆ ಹೊರಟಿದ್ದ ಇಂಡಿಗೋ ವಿಮಾನ ವೈದ್ಯಕೀಯ ಪರಿಸ್ಥಿತಿಯಿಂದ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಇಂಡಿಗೋದ 6E 63 ವಿಮಾನವು ಶನಿವಾರ ರಾತ್ರಿ 8.30 ಕ್ಕೆ ದೆಹಲಿಯಿಂದ ಹೊರಟಿತು, ಆದರೆ ಎರಡು ಗಂಟೆಗಳ ನಂತರ ವಿಮಾನದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಆರೋಗ್ಯ ಸಮಸ್ಯೆಗೆ ಒಳಗಾದ ಹಿನ್ನೆಲೆ ಪಾಕಿಸ್ತಾನದಲ್ಲಿ ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.
ಜಿಯೋ ನ್ಯೂಸ್ ಪ್ರಕಾರ, 55 ವರ್ಷದ ಭಾರತೀಯರೊಬ್ಬರು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿದ್ದು, ಅವರಿಗೆ ತಕ್ಷಣದ ವೈದ್ಯಕೀಯ ನೆರವು ಹಿನ್ನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಅನಾರೋಗ್ಯಗೊಂಡ ಪ್ರಯಾಣಿಕರಿಗೆ ತಕ್ಷಣಕ್ಕೆ ಆಕ್ಸಿಜನ್ ನೀಡಿದರೂ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆ ಭಾರತೀಯ ವಿಮಾನಯಾನ ಸಂಸ್ಥೆ ಕರಾಚಿ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ ಅನ್ನು ಸಂಪರ್ಕಿಸಿದೆ.
ಮಾನವೀಯ ನೆಲೆ ಆಧಾರದ ಮೇಲೆ ಕರಾಚಿ ಏರ್ ಟ್ರಾಫಿಕ್ ಕಂಟ್ರೋಲ್ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶಕ್ಕೆ ಅವಕಾಶ ನೀಡಿತು. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ, ಅಲ್ಲಿ ವೈದ್ಯಕೀಯ ತಂಡವು ಪ್ರಯಾಣಿಕರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಲು ವಿಮಾನ ಪ್ರವೇಶಿಸಿದರು.
ಈ ಸಮಸ್ಯೆ ಪರಿಹಾರ ಕಂಡ ಬಳಿಕ ವಿಮಾನವು ಕರಾಚಿಯಿಂದ ಸೌದಿ ಅರೇಬಿಯಾದ ಜಿದ್ದಾಗೆ ತೆರಳುವ ಬದಲಾಗಿ ದೆಹಲಿಗೆ ವಾಪಸ್ ಮರಳಿ ಅನಾರೋಗ್ಯಗೊಂಡ ಪ್ರಯಾಣಿಕನನ್ನು ಇಳಿಸಿದ ಬಳಿಕ ಮತ್ತೆ ಜಿದ್ದಾಕೆ ಹೊರಟಿದೆ ಎಂದು ವರದಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್