ಕಲ್ಲಿಕೋಟೆ : ಕಲ್ಲಿಕೋಟೆ ಮರ್ಕಝ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ನಿರತ ವಿದ್ಯಾರ್ಥಿಗಳು ಕಟ್ಟಿಕೊಂಡಿರುವ ಸಂಘ Markaz KSO ಇದರ ವಾರ್ಷಿಕ ಕನ್ನಡ ಕಲಾ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಇಝ್ದಿಹಾರ್ ಶೀರ್ಷಿಕೆಯಲ್ಲಿ ಡಿಸೆಂಬರ್ ತಿಂಗಳ 17,18,19,20 ನಾಲ್ಕು ದಿನಗಳಲ್ಲಿ ನಡೆಯಿತು.

ನೂರ ನಲ್ವತ್ತು ವಿದ್ಯಾರ್ಥಿಗಳು ಭಾಗವಹಿಸುವ ಅರವತ್ತಕ್ಕೂ ಮಿಕ್ಕ ವೈವಿಧ್ಯಮಯ ಕಾರ್ಯಕ್ರಮಗಳು ನಾಲ್ಕು ವೇದಿಕೆಗಳಲ್ಲಿ ಜರುಗಿದ್ದು ವಿದ್ಯಾರ್ಥಿಗಳ ಪ್ರತಿಭಾ ಅನಾವರಣಗೊಂಡಿದೆ. ಕಾಲಾತೀತ ಜ್ಞಾನದಾಳಕ್ಕೆ ಪ್ರಮೇಯದಡಿಯಲ್ಲಿ ಮುಸ್ಲಿಂ ವಿದ್ವತ್ ಪರಂಪರೆ, ಇತಿಹಾಸ , ವರ್ತಮಾನ , ಭವಿಷ್ಯ ದ ಕುರಿತು ಈ ವೇದಿಕೆಗಳು ಬಹುವಾಗಿ ಚರ್ಚಿಸಿದೆ.

ಇಝ್ದಿಹಾರ್ ವಾರ್ಷಿಕ ಕಲಾ ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್ ಉಸ್ತಾದರು ಮತ್ತು ಕರ್ನಾಟಕ ರಾಜ್ಯ ಉಲಮಾ ಒಕ್ಕೂಟ ಇದರ ಅಧ್ಯಕ್ಷರಾದ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್, ಮಾಣಿ ಭಾಗವಹಿಸಿ ಆಶೀರ್ವಚನ ನೀಡಿದರು. ಜಾಮಿಯಾ ಮರ್ಕಝ್ ಚಾನ್ಸಲರ್ ಸಿ.ಉಸ್ತಾದ್, ವೈಸ್ ಚಾನ್ಸಲರ್ ಅಡ್ವ ಹುಸೈನ್ ಸಖಾಫಿ ಉಸ್ತಾದ್ ಮತ್ತು ಪ್ರಧಾನ ಮುದರ್ರಿಸ್
ಧನ್ಯ ಉಪಸ್ಥಿತಿಯೂ ಮೆರುಗು ನೀಡಿದೆ.

ಕಶಫ್ ಶೇಫ್ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡರೆ, ಫಹಸ್ ಸ್ಕೋಪ್ ತಂಡ ರನ್ನರ್ ಗೆ ತೃಪ್ತಿಪಟ್ಟುಕೊಂಡಿದೆ. ಕಳೆದ ಮೂವತ್ತೆರಡು ವರ್ಷದ ಕೆಳಗೆ ಮೃದಾಳಿದ ಕನ್ನಡ ವಿದ್ಯಾರ್ಥಿ ಸಂಘಟನೆಗೆ ಇದೊಂದು ಹೊಸ ಮೈಲುಗಲ್ಲಾಗಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ