ದಮಾಮ್: ಸೌದಿ ಅರೇಬಿಯಾದ ಜಿಝಾನ್ನಲ್ಲಿ ಯುವತಿಯ ಅಪಹರಣ, ಅತ್ಯಾಚಾರ ಮತ್ತು ದರೋಡೆ ಪ್ರಕರಣದಲ್ಲಿ ಇಬ್ಬರು ಯೆಮೆನ್ ಮೂಲದ ಆರೋಪಿಗಳನ್ನು ಗಲ್ಲಿಗೇರಿಸಲಾಗಿದೆ. ಇಂಥಾ ಘೋರ ಅಪರಾಧಗಳಿಗೆ ಯಾವುದೇ ಅನುಕಂಪವನ್ನು ಅನುಮತಿಸುವುದಿಲ್ಲ ಎಂದು ಸೌದಿ ಆಂತರಿಕ ಸಚಿವಾಲಯ ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿದ ಅಪರಾಧವು ಸೌದಿ-ಯೆಮೆನ್ ಗಡಿ ಪ್ರದೇಶವಾದ ಜಿಝಾನ್ನಲ್ಲಿ ನಡೆದಿತ್ತು. ಅನಿವಾಸಿ ಮಹಿಳೆಯನ್ನು ಅಪಹರಿಸಿ, ಅತ್ಯಾಚಾರ ಮಾಡಿ, ದರೋಡೆ ಮಾಡಿ ವಿಡಿಯೋದಲ್ಲಿ ಸೆರೆ ಹಿಡಿದ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಯೆಮೆನ್ ಮೂಲದ ಯೂಸುಫ್ ಅಲಿ ಅಹ್ಮದ್ ಅಲ್ವಾನಿ ಮತ್ತು ಸುಲೈಮಾನ್ ಅಲಿ ಮುಹಮ್ಮದ್ ಅಬ್ದುಲ್ಲಾ ಅವರನ್ನು ಗಲ್ಲಿಗೇರಿಸಲಾಗಿದೆ ಎಂದು ಸೌದಿ ಆಂತರಿಕ ಸಚಿವಾಲಯ ಪ್ರಕಟಿಸಿದೆ.
ಆರೋಪಿಗಳ ವಿರುದ್ಧದ ತನಿಖೆಯು ತಪ್ಪಿತಸ್ಥರೆಂದು ಸಾಬೀತಾದ ನಂತರ ಮರಣದಂಡನೆಯನ್ನು ಕೈಗೊಳ್ಳಲಾಯಿತು ಮತ್ತು ಶಿಕ್ಷೆಯನ್ನು ಕೆಳ ನ್ಯಾಯಾಲಯ ಮತ್ತು ನಂತರ ಮೇಲ್ಮನವಿ ನ್ಯಾಯಾಲಯವು ಎತ್ತಿಹಿಡಿಯಿತು. ಆರೋಪಿಗಳು ಕಾನೂನು ಬಾಹಿರ ಹಾಗೂ ಹೇಯ ಕೃತ್ಯ ಎಸಗಿದ್ದಾರೆ. ಜೀವನ ಮತ್ತು ಘನತೆಯ ಮೇಲೆ ದಾಳಿ ಮಾಡುವ ಮೂಲಕ ಭೂಮಿಯ ಮೇಲೆ ಅವ್ಯವಸ್ಥೆಯನ್ನು ಸೃಷ್ಟಿಸುವುದು ಅವರ ಉದ್ದೇಶವಾಗಿತ್ತು. ಷರಿಯಾ ಕಾನೂನಿನಡಿಯಲ್ಲಿ ಇಬ್ಬರೂ ಕಠಿಣ ಶಿಕ್ಷೆಗೆ ಅರ್ಹರು ಎಂದು ನ್ಯಾಯಾಲಯವು ತೀರ್ಪಿನಲ್ಲಿ ಹೇಳಿದೆ. ದೇಶದ ಜನರ ಜೀವನ ಮತ್ತು ಸುರಕ್ಷತೆಗೆ ಸವಾಲನ್ನು ಸೃಷ್ಟಿಸುವ ಮೂಲಕ ಇಂತಹ ಹೇಯ ಕೃತ್ಯಗಳಲ್ಲಿ ತೊಡಗುವವರಿಗೆ ಈ ಶಿಕ್ಷೆ ಎಚ್ಚರಿಕೆಯಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ