ಖ್ಯಾತ ಉದ್ಯಮಿಯಾಗಿ ಕರಾವಳಿಯ ಹೆಮ್ಮೆಯ ಯುವ ಮುಂದಾಳುವಾಗಿರುವ ಸಮಾಜ ಸೇವಕ, ಕಾರುಣ್ಯ ಕರುಣಾಳು ಅಬ್ದುಲ್ಲತೀಫ್ ಗುರುಪುರ ಅವರಿಗೆ ‘ಕರುನಾಡ ಸೌಹಾರ್ದ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಾನ್ಯ ಲತೀಫ್ ಗುರುಪುರ ಅವರು ಅನಿ ಟ್ರೇಡಿಂಗ್ ಕಂಪೆನಿ ಸ್ಥಾಪಿಸಿ ಅದರಲ್ಲಿ ಯಶಸ್ವಿಯಾಗಿ ಹಲವಾರು ಮಂದಿಗೆ ಉದ್ಯೋಗವಕಾಶ ಕಲ್ಪಿಸಿ ಕೊಟ್ಟುದಲ್ಲದೆ ಬಡ ಹೆಣ್ಮಕ್ಕಳ ಮದುವೆ, ಬಡವರಿಗೆ ದಿನಸಿ ಕಿಟ್, ರಮಝಾನ್ ಕಿಟ್ ಹಾಗೂ ಆರ್ಥಿಕ ಸಹಾಯವನ್ನು ನೀಡುತ್ತಾ ಬರುತ್ತಿದ್ದಾರೆ. ಕೊರೋನಾ ಸಂದರ್ಭದಲ್ಲಿ ಧರ್ಮಜಾತಿ ಬೇಧಮನ್ಯೆ ಅಪಾರ ಕುಟುಂಬಗಳಿಗೆ ಆಸರೆಯಾಗಿದ್ದರು.
ಬಹುಮುಖ ಸೇವೆಗಳಿಂದ ಜನಾನುರಾಗಿಯಾಗಿ ಸುಖ್ಯಾತರಾದ ಲತೀಫ್ ಗುರುಪುರ ಅವರ ಈ ಸೇವೆಗಳನ್ನು ಗುರುತಿಸಿ ಇದೇ ಡಿಸೆಂಬರ್ 26 ರಂದು ಪುತ್ತೂರಿನ ಸುದಾನ ಮೈದಾನದಲ್ಲಿ ನಡೆದ ನೂರೇ ಅಜ್ಮೀರ್ ಹಾಗೂ ‘ಮಾದಕತೆ ಮಾರಣಾಂತಿಕ’ ಎಂಬ ವಿಶೇಷ ಪುಸ್ತಕ ಬಿಡುಗಡೆಯ ಸಮಾರಂಭದಲ್ಲಿ ಸೇರಿದ್ದ ದಶಸಹಸ್ರ ಸಂಖ್ಯೆಯ ಜನಸ್ತೋಮದಲ್ಲಿ ರಾಜ್ಯಮಟ್ಟದ ಗಣ್ಯರ ಉಪಸ್ಥಿಯೊಂದಿಗೆ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಹಿಂದೂಸ್ಥಾನ್ ಗೋಲ್ಡ್ ಕಂಪೆನಿ ಮಾಲಕರಾದ ಸಿ.ಕೆ. ಮೌಲಾ ಶರೀಫ್, ಖ್ಯಾತ ಉದ್ಯಮಿ ವೆಂಕಟೇಶ್ ಬೆಂಗಳೂರು ಮುಂತಾದ ಗಣ್ಯಾತಿ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್