ಬೆಳ್ತಂಗಡಿ : ಹಳೆಯ ಪ್ರಕರಣವೊಂದರ ಹೆಸರಿನಲ್ಲಿ, NIA ಅಧಿಕಾರಿಗಳು ಮತ್ತು ಬೆಳ್ತಂಗಡಿ ಪೊಲೀಸರು ಬೆಳ್ತಂಗಡಿಯ ಸೋಣಂದೂರಿನ ಸುಹೈಲ್ ಪಾಶ ಎಂಬ ಅಮಾಯಕ ಮುಸ್ಲಿಂ ಯುವಕನನ್ನು ಇತ್ತೀಚಿಗೆ ವಿಚಾರಣೆಯ ಹೆಸರಿನಲ್ಲಿ ಕರೆದೊಯ್ದು, ಬಂದೂಕಿನಿಂದ ಆತನ ಮರ್ಮಾಂಗಕ್ಕೆ ಹೊಡೆದು ಗಂಭೀರ ಹಲ್ಲೆ ನಡೆಸಿದ ನಂತರ ದಾರಿಯಲ್ಲಿ ಬಿಟ್ಟು ಹೋದ ಪ್ರಕರಣಕ್ಕೆ ಸಂಬಂಧಿಸಿ ಯುವಕ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಈ ಬಗ್ಗೆ ಪೊಲೀಸ್ ದೌರ್ಜನ್ಯದ ವಿರುದ್ಧ ಜಿಲ್ಲೆಯ ರಾಜಕೀಯ ಸಾಮಾಜಿಕ ಮುಖಂಡರು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ ಬಳಿಕ ಪೊಲೀಸ್ ವರಿಷ್ಠಾಧಿಕಾರಿಗಳು ಇಲಾಖಾ ತನಿಖೆಗೆ ಆದೇಶಿಸಿದ್ದರು, ನಂತರ ಕಾಟಾಚಾರದ ತನಿಖೆ ನಡೆಸಿದ ಇಲಾಖೆ ಡಿಸೆಂಬರ್ 31 ರಂದು ಪೊಲೀಸ್ ಅಧಿಕಾರಿಗಳ ತಂಡ ಸುಹೈಲ್ ಬೆಳ್ತಂಗಡಿಯಲ್ಲಿ ನಡೆಸುತ್ತಿರುವ ಜ್ಯೂಸ್ ಅಂಗಡಿ ಗೆ ತೆರಳಿ ದಾಖಲಿಸಿರುವ ದೂರನ್ನು ಹಿಂಪಡೆಯಲು ಅವನ ಮೇಲೆ ಮಾನಸಿಕ ಒತ್ತಡ ಹೇರಿ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ ಎಂದು SDPI ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ತಿಳಿಸಿದ್ದಾರೆ.
ಇದನ್ನು ಪ್ರಶ್ನಿಸಲು ಬಂದ ಸ್ಥಳೀಯ ಪಂಚಾಯತ್ ಸದಸ್ಯ ರೊಬ್ಬರ ವಿರುದ್ಧವೂ ಪೊಲೀಸರು ಕೇಸು ದಾಖಲಿಸುವುದಾಗಿ ಬೆದರಿಸಿರುತ್ತಾರೆ ಇದು ಖಂಡನೀಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ, ಬರವಣಿಗೆಯ ಮೂಲಕ ಸಹಿ ಹಾಕಿ ಕೊಡಬೇಕೆಂದು ಒತ್ತಡ ಹಾಕಿ ಯುವಕನ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿರುವುದಾಗಿ ಆರೋಪ ಕೇಳಿ ಬರುತ್ತಿದೆ . ಅಮಾನುಷವಾಗಿ ವರ್ತಿಸಿದ ಬೆಳ್ತಂಗಡಿ ಪೊಲೀಸರ ಕೃತ್ಯ ಗೂಂಡಾಗಿರಿಗೆ ಸಮಾನವಾಗಿದೆ, . ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರಿಗೆ ಅಕ್ಬರ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್