ರಿಯಾದ್: ಭಾರತೀಯ, ಮಲಯಾಳಿ ಚಾಲಕರೊಬ್ಬರನ್ನು ಕೊಂದ ಈಜಿಪ್ಟ್ ಪ್ರಜೆಗೆ ಸೌದಿ ಅರೇಬಿಯಾದಲ್ಲಿ ಮರಣದಂಡನೆಯನ್ನು ಜಾರಿಗೊಳಿಸಲಾಗಿದೆ. ಜಿದ್ದಾದ ಅಲ್ಝಾಮಿರ್ ಜಿಲ್ಲೆಯಲ್ಲಿ ಮಲಪ್ಪುರಂನ ಕೊಟ್ಟಕ್ಕಲ್, ಪರಪ್ಪೂರ್ ಸೂಪಿಬಜಾರ್ ಮೂಲದ ನಂಬಿಯಾಡತ್ ಕುಂಞಲವಿ (45) ಎಂಬವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಈಜಿಪ್ಟ್ ಪ್ರಜೆ ಅಹ್ಮದ್ ಫುವಾದ್ ಅಲ್ಸಯೀದ್ ಅಲ್ಲುವೈಸಿಗೆ ಇಂದು ಮಕ್ಕಾ ಪ್ರಾಂತ್ಯದಲ್ಲಿ ಮರಣದಂಡನೆಯನ್ನು ಜಾರಿಗೊಳಿಸಲಾಗಿದೆ.
ಈ ಘಟನೆಯು ಆಗಸ್ಟ್ 1, 2021 ರಂದು ನಡೆದಿದೆ. ಕುಂಞಲವಿ ಅವರು ಜಿದ್ದಾದ ಅಲ್ ಮಮ್ಲಕಾದಲ್ಲಿ ಟ್ರಕ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಬಹಳ ಹೊತ್ತು ಕಳೆದರೂ, ಕೋಣೆಗೆ ಹಿಂತಿರುಗದ ಹಿನ್ನೆಲೆಯಲ್ಲಿ ಅವರ ಸ್ನೇಹಿತರು ನಡೆಸಿದ ಹುಡುಕಾಟದಲ್ಲಿ ರಸ್ತೆಬದಿಯಲ್ಲಿ ಅವರ ಟ್ರಕ್ ಪತ್ತೆಯಾಗಿದೆ. ಟ್ರಕ್ನಲ್ಲಿ ಚಾಕುವಿನಿಂದ ಇರಿತಕ್ಕೊಳಗಾಗಿ ಕೊಲ್ಲಲ್ಪಟ್ಟಿದ್ದರು. ಭದ್ರತಾ ಇಲಾಖೆ ನಡೆಸಿದ ತನಿಖೆಯ ವೇಳೆ ಈಜಿಪ್ಟ್ ಪ್ರಜೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಜಿದ್ದಾ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ.
ಆರೋಪಪಟ್ಟಿ ಪ್ರಕಾರ, ಈಜಿಪ್ಟ್ ಪ್ರಜೆಯು ಕುಂಞಲವಿಯೊಂದಿಗೆ ವಾಹನವನ್ನು ಹತ್ತಿ, ಅವರ ದೇಹದ ವಿವಿಧ ಭಾಗಗಳಿಗೆ ಹರಿತವಾದ ವಸ್ತುವಿನಿಂದ ಇರಿದು, ಅವರ ಮರಣಕ್ಕೆ ಕಾರಣವಾಯಿತು ಮತ್ತು ಹಣವನ್ನು ದೋಚಿ ಆರೋಪಿ ಪರಾರಿಯಾದನು. ಆರೋಪಿಯು ತಪ್ಪೊಪ್ಪಿಕೊಂಡಿದ್ದು, ಸುಪ್ರೀಂ ಕೋರ್ಟ್ ನೀಡಿದ ಮರಣದಂಡನೆಯನ್ನು ಜಾರಿಗೊಳಿಸಲು ರಾಜಮನೆತನ ಆದೇಶವನ್ನು ನೀಡಿದೆ. ಇದರಿಂದಾಗಿ ಮರಣದಂಡನೆ ವಿಧಿಸಲಾಯಿತು ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ