ಬೆಂಗಳೂರು, ಜ.06: ಕೊರೋನಾ ವೈರಸ್ ಗಿಂತಲೂ ವಿಭಿನ್ನವಾಗಿರುವ HMPV ವೈರಸ್ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ HMPV ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಮೊದಲ ಕೇಸ್ ಪತ್ತೆಯಾಗಿದೆ.
ಬೆಂಗಳೂರಿನ 8 ತಿಂಗಳ ಮಗುವಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್ ವೈರಸ್ನೊಂದಿಗೆ ಇದಕ್ಕೆ ಸಂಬಂಧ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರು ಮಾಹಿತಿ ನೀಡಿದ್ದಾರೆ.
ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರು ತಿಳಿಸಿದ್ದಾರೆ.
ಇನ್ನೂ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಕಾಣಿಸಿಕೊಂಡಿರುವ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ ಮತ್ತೆ ಸೋಂಕು ಹೇಗೆ ಹರಡಿದೆ ಎಂಬುದು ಸ್ಪಷ್ಟವಾಗಿಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ಅವರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ