ಜಿದ್ದಾ : ಸೌದಿ ಅರೇಬಿಯಾದ ಜಿದ್ದಾದಲ್ಲಿ ಭಾರೀ ಮಳೆಯಾಗಿದೆ. ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿದ್ದಾ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಸೋಮವಾರ ಬೆಳಗ್ಗೆ ಜಿದ್ದಾ ನಗರದ ಎಲ್ಲಾ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದೆ.

ಇಂದು ಬೆಳಗ್ಗೆಯಿಂದ ಸುರಿದ ಮಳೆಗೆ ನಗರದ ಹಲವು ರಸ್ತೆಗಳು ಜಲಾವೃತಗೊಂಡಿವೆ. ಹಲವಾರು ವಾಹನಗಳು ಕೊಚ್ಚಿ ಹೋಗಿದೆ. ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಬುಧವಾರದವರೆಗೂ ಮಳೆ ಮುಂದುವರಿಯುವ ನಿರೀಕ್ಷೆ ಇದೆ.
ಮಳೆಯು ಉತ್ತರ ಪ್ರಾಂತ್ಯದಿಂದ ಅಲ್ ಕಸೀಮ್, ರಿಯಾದ್, ಪೂರ್ವ ಪ್ರಾಂತ್ಯ, ಅಲ್ಬಹಾ, ಅಸಿರ್, ಮದೀನಾ ಮತ್ತು ಮಕ್ಕಾವನ್ನು ತಲುಪಲಿದೆ. ಏತನ್ಮಧ್ಯೆ, ಭಾರೀ ಮಳೆಯ ಕಾರಣ, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ವಿಮಾನಯಾನ ಸಂಸ್ಥೆಗಳೊಂದಿಗೆ ವಿಚಾರಿಸುವಂತೆ ಜಿದ್ದಾ ಕಿಂಗ್ ಅಬ್ದುಲ್ ಅಝೀಝ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದೆ. ಭಾರೀ ಮಳೆಯಿಂದಾಗಿ ಕೆಲವು ವಿಮಾನಗಳು ವಿಳಂಬವಾಗಬಹುದು.

ಹವಾಮಾನ ಕೇಂದ್ರವು ಸೋಮವಾರ ಬೆಳಗ್ಗೆ 5 ರಿಂದ ಮಧ್ಯಾಹ್ನ 3 ರವರೆಗೆ ಜಿದ್ದಾ ನಗರದಲ್ಲಿ ರೆಡ್ ಅಲರ್ಟ್ ಘೋಷಿಸಿತ್ತು. ಮಳೆಯ ಬಗ್ಗೆ ಅಧಿಕೃತ ಮೂಲಗಳ ಸೂಚನೆಗಳನ್ನು ಅನುಸರಿಸಿ ಮತ್ತು ಜಾಗರೂಕರಾಗಿರಿ ಎಂದು ಅಧಿಕಾರಿಗಳು ಜನರಿಗೆ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್