ಪುತ್ತೂರು: ಎಸ್ ಕೆ ಎಸ್ ಎಸ್ ಎಫ್ ದ. ಕ ಜಿಲ್ಲಾ ಈಸ್ಟ್ ಜಿಲ್ಲೆ ವತಿಯಿಂದ ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ಎಂಬ ವಾಕ್ಯದೊಂದಿಗೆ ಜ.26 ರ ಗಣರಾಜ್ಯೋತ್ಸವ ದಿನದಂದು ಹಮ್ಮಿಕೊಂಡ ಮಾನವ ಸರಪಳಿ ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನಡೆಯುವ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಲು ಎಸ್ ಕೆಎಸ್ ಎಸ್ ಎಫ್ ಕಾರ್ಯಕರ್ತ ಸಮಾಜ ಸೇವಕ ತಾಜುದ್ದೀನ್ ಅರಂತೋಡು ಕರೆ ನೀಡಿದ್ದಾರೆ.
ರಾಜ್ಯಾದ್ಯಂತ ವಿವಿಧ ಜಿಲ್ಲಾ ಕೇಂದ್ರ ದಲ್ಲಿ ಏಕ ಕಾಲ ದಲ್ಲಿ ಮಾನವ ಸರಪಳಿ ಕಾರ್ಯಕ್ರಮ ನಡೆಯುಲಿದೆ . ಈ ಬಾರಿ ದ.ಕ ಈಸ್ಟ್ ವ್ಯಾಪ್ತಿಯ 7 ವಲಯಗಳು 27ಕ್ಲಸ್ಟರ್ ಗಳು144 ಶಾಖೆಗಳ ಸದಸ್ಯರುಗಳು ಹಾಗೂ ಸಾರ್ವಜನಿಕರು ಒಟ್ಟು ಸೇರಿ ಸಂಜೆ 3 ಗಂಟೆಗೆ ಪರ್ಪುಂಜದಿಂದ ಬೃಹತ್ ಕಾಲ್ನಡಿಗೆ ಜಾಥಾ ನಡೆಯಲಿದ್ದು ದಫ್ ತಂಡ ,ಸ್ಕೌಟು ತಂಡ ,ವಿಖಾಯ ಸಮವಸ್ತ್ರ ಗಳಿಂದ ಮೆರವಣಿಗೆಗೆ ಮೆರಗು ನೀಡಲಿದ್ದಾರೆ.
ಬಳಿಕ ಕುಂಬ್ರ ಜಂಕ್ಷನ್ ನಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶೈಖುನಾ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ,ಮೌಲಾನ ಅನಿಸ್ ಕೌಸರಿ,ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ,ಪುತ್ತೂರು ಶಾಸಕ ಅಶೋಕ್ ರೈ, ನಿಕೇತ್ ರಾಜ್ ಮೌರ್ಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಅಲ್ಲದೆ ಜಿಲ್ಲೆಯ ಖ್ಯಾತ ಭಾಷಣ ಗಾರರು ಸಾಮಾಜಿಕ ಧಾರ್ಮಿಕ ಉಲಮಾ ಉಮಾರಾ ಮುಖಂಡರು ಭಾಗವಹಿಸಲಿದ್ದು ಕಾರ್ಯಕ್ರಮದಲ್ಲಿ ಈಸ್ಟ್ ಜಿಲ್ಲೆಯ ಎಸ್ ಕೆಎಸ್ ಎಸ್ ಎಫ್ ಶಾಖೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ತಾಜುದ್ದೀನ್ ಅರಂತೋಡು ಕರೆ ನೀಡಿದ್ದಾರೆ.

















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್