ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಮಝಾರೇ ಶರೀಫ್ ಗಳಲ್ಲೊಂದಾದ ಕನ್ಯಾನ ಹಝ್ರತ್ ಶಾಹುಲ್ ಹಮೀದ್ ವಲಿಯುಲ್ಲಾಹಿ ಖ.ಸಿ.ರವರ ಹೆಸರಲ್ಲಿ ಪ್ರತೀ ಮೂರು ವರ್ಷಕ್ಕೊಮ್ಮೆ ನಡೆಸಲ್ಪಡುವ ಉದಯಾಸ್ತಮಾನ ಉರೂಸ್ ಮುಬಾರಕ್ ಗೆ ಇಂದು ವಿದ್ಯುಕ್ತ ಚಾಲನೆ ಲಭಿಸಲಿದೆ. ಜನವರಿ 9 ರಿಂದ ಜನವರಿ 19 ರ ತನಕ ಉರೂಸ್ ಕಾರ್ಯಕ್ರಮ ನಡೆಯಲಿದೆ.

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ ಪಿ ಉಸ್ತಾದರ ನೇತೃತ್ವದಲ್ಲಿ ನಡೆಯುವ ಉದಯಾಸ್ತಮಾನ ಉರೂಸ್ ಮುಬಾರಕಿನ ಉದ್ಘಾಟನಾ ದಿನವಾದ ಇಂದು ಸಯ್ಯಿದ್ ಶಹೀರ್ ಅಲ್ ಬುಖಾರಿ ಪೊಸೋಟು, ಮೌಲಾನ ಪೇರೋಡು ಅಬ್ದುಲ್ ರಹಿಮಾನ್ ಸಖಾಫಿ , ಕೆ.ಎಂ ಇಬ್ರಾಹಿಂ ಫೈಝಿ ಕನ್ಯಾನ ಮುಂತಾದವರು ಭಾಗವಹಿಸಲಿದ್ದಾರೆ
ಕೇರಳ ಮತ್ತು ಕರ್ನಾಟಕದ ಸುಪ್ರಸಿದ್ದ ವಾಗ್ಮಿಗಳೂ ಸಾದಾತುಗಳೂ ಭಾಗವಹಿಸುವ ಮುಂದಿನ 9 ದಿವಸಗಳ ಕಾಲ ನಡೆಯುವ ಧಾರ್ಮಿಕ ಮತ ಪ್ರವಚನ ಹಾಗೂ ಕೊನೆಯ ದಿನದ ಮೌಲಿದ್ ಮತ್ತು ಅನ್ನದಾನ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ದುಲ್ ಫುಖಾರ್ ಗಲ್ಫ್ ಕಮಿಟಿ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ದುಲ್ ಫುಖಾರ್ ಗಲ್ಫ್ ಕಮಿಟಿಯ ಪ್ರಾಯೋಜಕತ್ವದಲ್ಲಿ ಪ್ರತಿ ದಿನ ರಾತ್ರಿಯ ಉರೂಸ್ ಕಾರ್ಯಕ್ರಮವನ್ನು ಆನ್ ಲೈನ್ ಮೂಲಕ ನೇರ ಪ್ರಸಾರ ಮಾಡಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್