ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಮಝಾರೇ ಶರೀಫ್ ಗಳಲ್ಲೊಂದಾದ ಕನ್ಯಾನ ಹಝ್ರತ್ ಶಾಹುಲ್ ಹಮೀದ್ ವಲಿಯುಲ್ಲಾಹಿ ಖ.ಸಿ.ರವರ ಹೆಸರಲ್ಲಿ ಪ್ರತೀ ಮೂರು ವರ್ಷಕ್ಕೊಮ್ಮೆ ನಡೆಸಲ್ಪಡುವ ಉದಯಾಸ್ತಮಾನ ಉರೂಸ್ ಮುಬಾರಕ್ ಗೆ ಇಂದು ವಿದ್ಯುಕ್ತ ಚಾಲನೆ ಲಭಿಸಲಿದೆ. ಜನವರಿ 9 ರಿಂದ ಜನವರಿ 19 ರ ತನಕ ಉರೂಸ್ ಕಾರ್ಯಕ್ರಮ ನಡೆಯಲಿದೆ.

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ ಪಿ ಉಸ್ತಾದರ ನೇತೃತ್ವದಲ್ಲಿ ನಡೆಯುವ ಉದಯಾಸ್ತಮಾನ ಉರೂಸ್ ಮುಬಾರಕಿನ ಉದ್ಘಾಟನಾ ದಿನವಾದ ಇಂದು ಸಯ್ಯಿದ್ ಶಹೀರ್ ಅಲ್ ಬುಖಾರಿ ಪೊಸೋಟು, ಮೌಲಾನ ಪೇರೋಡು ಅಬ್ದುಲ್ ರಹಿಮಾನ್ ಸಖಾಫಿ , ಕೆ.ಎಂ ಇಬ್ರಾಹಿಂ ಫೈಝಿ ಕನ್ಯಾನ ಮುಂತಾದವರು ಭಾಗವಹಿಸಲಿದ್ದಾರೆ
ಕೇರಳ ಮತ್ತು ಕರ್ನಾಟಕದ ಸುಪ್ರಸಿದ್ದ ವಾಗ್ಮಿಗಳೂ ಸಾದಾತುಗಳೂ ಭಾಗವಹಿಸುವ ಮುಂದಿನ 9 ದಿವಸಗಳ ಕಾಲ ನಡೆಯುವ ಧಾರ್ಮಿಕ ಮತ ಪ್ರವಚನ ಹಾಗೂ ಕೊನೆಯ ದಿನದ ಮೌಲಿದ್ ಮತ್ತು ಅನ್ನದಾನ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ದುಲ್ ಫುಖಾರ್ ಗಲ್ಫ್ ಕಮಿಟಿ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ದುಲ್ ಫುಖಾರ್ ಗಲ್ಫ್ ಕಮಿಟಿಯ ಪ್ರಾಯೋಜಕತ್ವದಲ್ಲಿ ಪ್ರತಿ ದಿನ ರಾತ್ರಿಯ ಉರೂಸ್ ಕಾರ್ಯಕ್ರಮವನ್ನು ಆನ್ ಲೈನ್ ಮೂಲಕ ನೇರ ಪ್ರಸಾರ ಮಾಡಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ತಬೂಕ್ ಘಟಕದ ವಾರ್ಷಿಕ ಮಹಾಸಭೆ
ಪಶ್ಚಿಮ ಏಷ್ಯಾ ಬಿಕ್ಕಟ್ಟು: ಗಲ್ಫ್ ರಾಷ್ಟ್ರಗಳಿಂದ 8.43 ಲಕ್ಷ ಭಾರತೀಯರು ವಾಪಸ್
ಶಾಫಿ ಸಅದಿ ವಿರುದ್ಧ ಸುಳ್ಳು ಸುದ್ದಿ ಪ್ರಕಟ: ‘ಮಿನಾರಂ’ ಡಿಜಿಟಲ್ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ
ಎಪ್ರಿಲ್ 12: ಮಾದರಿ ಮದುವೆ ಅಭಿಯಾನ ಸಮಾರೋಪದ ಪ್ರಚಾರಾರ್ಥ ಸಾಂಘಿಕ ನಾಯಕರ ಸಭೆ
ಕಾಟಿಪಳ್ಳ: ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ- ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ
ಶರಫುಲ್ ಉಲಮಾ 7ನೇ ವಾರ್ಷಿಕ ಅನುಸ್ಮರಣೆ- ಮೇ 13, 14 ರಂದು ವಿವಿಧ ಕಾರ್ಯಕ್ರಮ
ಬಶೀರ್ ಕಿನ್ಯ ಅವರಿಗೆ ಸಮ್ಮೇಳನಾಧ್ಯಕ್ಷತೆಯ ಗೌರವ: ಸಾಹಿತ್ಯ ಲೋಕದ ಬಹುಭಾಷಾ ಪಂಡಿತನಿಗೆ ಒಲಿದ ಮನ್ನಣೆ
ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣ- ಐತಿಹಾಸಿಕ ‘ಮಕ್ಕಳ ಸ್ನೇಹಿ ಸಾರಿಗೆ’ ಯೋಜನೆ ಸಿದ್ಧ
ಕಿನ್ಯಾ ‘ಗೋಲ್ಡನ್ ಹೆಲ್ತ್’ ಶಿಲಾನ್ಯಾಸ: ರೋಗ ಬರದಂತೆ ತಡೆಯುವ ಜನಜಾಗೃತಿ ಇಂದಿನ ಅಗತ್ಯ- ಸ್ಪೀಕರ್ ಯು.ಟಿ. ಖಾದರ್
ಡಿಕೆಎಸ್ಸಿ ಅಲ್-ಖೋಬರ್ ಘಟಕ: ಮಾಸಿಕ ಸಭೆ ಹಾಗೂ ಗಣ್ಯರಿಗೆ ಸನ್ಮಾನ