ಮದೀನತುಲ್ ಮುನವ್ವರಃ : ಮದೀನಾದಲ್ಲಿರುವ ಪ್ರವಾದಿ ಮಸೀದಿ(ಮಸ್ಜಿದುನ್ನಬವಿ)ಯಲ್ಲಿ ರೌಳಾ ಷರೀಫ್ ಸಂದರ್ಶನ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಇನ್ಮುಂದೆ ಪ್ರತಿ 20 ನಿಮಿಷಕ್ಕೊಮ್ಮೆ ಅಪಾಯಿಂಟ್ಮೆಂಟ್ ಮಾಡುವ ಮೂಲಕ ರೌಳಾವನ್ನು ಭೇಟಿ ಮಾಡಬಹುದು.
ಜನಸಂದಣಿ ನಿಯಂತ್ರಣದ ಭಾಗವಾಗಿ, ಓರ್ವ ವ್ಯಕ್ತಿಗೆ ವರ್ಷಕ್ಕೊಮ್ಮೆ ಮಾತ್ರ ರೌಳಾಗೆ ಭೇಟಿ ನೀಡಲು ಅನುಮತಿ ನೀಡಲಾಗಿತ್ತು. ಈ ನಿರ್ಬಂಧವನ್ನು ಸಡಿಲಿಸಲಾಗಿದೆ. ಇದಕ್ಕಾಗಿ ನುಸುಕ್ ಆ್ಯಪ್ ‘ಇಮ್ಮಿಡಿಯೇಟ್ ಪಾತ್’ ಎಂಬ ವಿಶೇಷ ಆಯ್ಕೆಯನ್ನು ಹೊಂದಿದೆ. ಇದರಿಂದಾಗಿ ಆಗಾಗ ಭೇಟಿ ನೀಡುವ ಅವಕಾಶ ಸಿಗಲಿದೆ. ಪ್ರವಾದಿ ಮಸೀದಿಯ ಸಮೀಪ ತಲುಪಿದ ನಂತರ ಈ ಆಯ್ಕೆಯ ಮೂಲಕ ಪರವಾನಗಿ ಪಡೆಯಲು ಸಾಧ್ಯವಿದೆ. ಇದನ್ನು ನುಸುಕ್ ಆ್ಯಪ್ ಮ್ಯಾನೇಜ್ಮೆಂಟ್ ವಿವರಿಸಿದೆ.
ಪ್ರತಿ ಗ್ರೂಪಿಗೆ ರೌಳಾದಲ್ಲಿ ಪ್ರಾರ್ಥನೆ ಮಾಡಲು ಹತ್ತು ನಿಮಿಷಗಳಿವೆ. ಭೇಟಿ ನೀಡುವವರು ಅರ್ಧ ಗಂಟೆ ಮುಂಚಿತವಾಗಿ ರೌಳಾ ಸಮೀಪ ತಲುಪಬೇಕು ಎಂಬ ಸಲಹೆಯೂ ಇದೆ. ಪ್ರವಾದಿ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಪ್ರವಾದಿ ಸನ್ನಿಧಿಯಲ್ಲಿ ಸಲಾಂ ಹೇಳುವುದು ಮುಂತಾದವುಗಳಿಗೆ ಪರವಾನಗಿ ಅಗತ್ಯವಿಲ್ಲ.
ಮದೀನಾದ ಮಸೀದಿಯಲ್ಲಿ ಪ್ರವಾದಿಯವರು ಬೋಧಿಸಿದ ಮಿಂಬರ್ ಮತ್ತು ಪ್ರವಾದಿಯವರ ಮನೆ ನಡುವಿನ ಸ್ಥಳವೇ ರೌಳಾ ಶರೀಫ್. ಇಲ್ಲಿ ಪ್ರಾರ್ಥನೆ ಸಲ್ಲಿಸಲು ಪರವಾನಗಿ ಅಗತ್ಯವಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ