ಕಾಸರಗೋಡು: ಇಲ್ಲಿನ ಕುಂಬಳೆಯಲ್ಲಿ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಪುಟ್ಟ ಮಗುವೊಂದು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿಗಳ ಪುತ್ರ ಅನಸ್ ಎಂಬ ಎರಡು ವರ್ಷದ ಮಗು ಮೃತಪಟ್ಟಿದೆ.
ಶನಿವಾರ ಸಂಜೆ ಮಗು ಪಿಸ್ತಾವನ್ನು ತಿನ್ನುತ್ತಿದ್ದ ವೇಳೆ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಮಗುವನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಅವರು ಮನೆಗೆ ಮರಳಿದರು, ಆದರೆ ಉಸಿರಾಟದ ತೊಂದರೆ ಅನುಭವಿಸಿದ ನಂತರ ಭಾನುವಾರ ಬೆಳಿಗ್ಗೆ ಮಗುವನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಮಗು ಮೃತಪಟ್ಟಿದೆ.
ಮಗುವಿನ ತಂದೆ ಅನ್ವರ್ ಕೆಲವು ದಿನಗಳ ಹಿಂದೆಯಷ್ಟೇ ಗಲ್ಫ್ಗೆ ಹೋಗಿದ್ದರು. ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಪುಟ್ಟ ಮಗು ಅನಸ್ ನ ಅನಿರೀಕ್ಷಿತ ನಿಧನವು ಕುಟುಂಬ ಸದಸ್ಯರು ಮತ್ತು ಸ್ಥಳೀಯರನ್ನು ಶೋಕದಲ್ಲಿ ಮುಳುಗಿಸಿದೆ. ಕುಂಬಳೆ ಬದರ್ ಜುಮಾ ಮಸೀದಿಯ ಖಬರ್ ಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅನಸ್ ಗೆ ಆಯಿಷಾ ಎಂಬ ಸಹೋದರಿಯೂ ಇದ್ದಾಳೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್