ಮಂಗಳೂರು, ಜ.17: ಬಂದೂಕು ತೋರಿಸಿ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಭಾರೀ ದರೋಡೆ ನಡೆದಿದೆ.

ಮಂಗಳೂರಿನ ಕೆ.ಸಿ ರೋಡ್ ಶಾಖೆಯ ಕೋಟೆಕಾರು ಸಹಕಾರಿ ಬ್ಯಾಂಕಿನಲ್ಲಿ ದರೋಡೆಯಾಗಿದೆ. ಹಾಡಹಗಲೇ ಬ್ಯಾಂಕ್ಗೆ ನುಗ್ಗಿದ ಐವರು ಆಘಂತುಕರು ಬಂದೂಕು ತೋರಿಸಿ ದರೋಡೆ ಮಾಡಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಫಿಯೆಟ್ ಕಾರಿನಲ್ಲಿ ಬಂದಿದ್ದ ದರೋಡೆಕೋರರಿಂದ ಘಟನೆ ನಡೆದಿದೆ ಎಂದು ಮಾಹಿತಿ ದೊರೆತಿದೆ.
ಬಂದೂಕು ತೋರಿಸಿ ದರೋಡೆ ಮಾಡಿರುವ ಈ ಗ್ಯಾಂಗ್ ಬ್ಯಾಂಕ್ನಲ್ಲಿದ್ದ ಸುಮಾರು 15 ಲಕ್ಷ ರೂಪಾಯಿ ನಗದು ಮತ್ತು ಸುಮಾರು 10 ಕೋಟಿಯ ಚಿನ್ನಾಭರಣ ಕಳ್ಳತನ ಮಾಡಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕೆಸಿ ರೋಡ್ ಮುಸ್ಲಿಂ ಬಾಹುಳ್ಯ ಪ್ರದೇಶವಾಗಿರುವುದರಿಂದ ಶುಕ್ರವಾರ ಮಧ್ಯಾಹ್ನ ಅಂಗಡಿಗಳೆಲ್ಲ ಮುಚ್ಚಿ ಮುಸ್ಲಿಮರು ಮಸೀದಿಗೆ ತೆರಲುವ ಸಂಧರ್ಬವನ್ನೇ ದರೋಡೆಕೋರರು ಆರಿಸಿಕೊಂಡಿದ್ದರು. ಅದೂ ಅಲ್ಲದೇ ಬ್ಯಾಂಕಿನ ಸಿಸಿಟಿವಿ ಕೂಡಾ ದುರಸ್ತಿ ಕಾರ್ಯದಲ್ಲಿತ್ತು ಹಾಗೂ ಚಿನ್ನಾಭರಣಗಳನ್ನಿಟ್ಟ ಖಜಾನೆ ತೆರದೇ ಇತ್ತು ಎನ್ನಲಾಗುತ್ತಿದೆ.
ಮಧ್ಯಾಹ್ನ 1.15 ಗಂಟೆ ಸುಮಾರಿಗೆ ಖದೀಮರು ಗೋಣಿ ಚೀಲದಲ್ಲಿ ನಗದು ಮತ್ತು ಚಿನ್ನಾಭರಣಗಳನ್ನು ಹೊತ್ತು ಫಿಯೇಟ್ ಕಾರಿನಲ್ಲಿ ಪರಾರಿಯಾಗುವ ದೃಶ್ಯವು ಸಮೀಪದ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರ ತಂಡ ದೌಡಾಯಿಸಿ ಪರಿಶೀಲಿಸುತ್ತಿದೆ. ಬ್ಯಾಂಕಿಗೆ ಸ್ಥಳೀಯ ಶಾಸಕರಾಗಿರುವ ಯುಟಿ ಖಾದರ್ ಆಗಮಿಸಿ ಸಿಬ್ಬಂದಿ ಜೊತೆ ಮಾತನಾಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ