ಮಂಗಳೂರು: ಅಖಿಲ ಭಾರತ ಬ್ಯಾರಿ ಮಹಾಸಭಾ ನಿಯೋಗದಿಂದ ಇಂದು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ಅಲ್ಪ ಸಂಖ್ಯಾತ ಆಯೋಗದ ಆಯುಕ್ತರಾದ ನಿಸಾರ್ ಅಹಮದ್ ರವರನ್ನು ಭೇಟಿ ಮಾಡಿ ಕರ್ನಾಟಕದಾದ್ಯಂತ ವಾಸಿಸುತ್ತಿರುವ ಸುಮಾರು ಇಪ್ಪತ್ತೈದು ಲಕ್ಷದಷ್ಟು ಜನ ಸಂಖ್ಯೆಯಲ್ಲಿರುವ ಅತಿಸೂಕ್ಷ್ಮ ಅಲ್ಪ ಸಂಖ್ಯಾತ ಮೂಲನಿವಾಸಿ ಬ್ಯಾರಿ ಭಾಷಿತ ಜನಾಂಗದ ಜನರಿಗೆ ವಿವಾಹ ಮತ್ತು ಇನ್ನಿತರ ಕಾರ್ಯಗಳಿಗೆ ಪ್ರಯೋಜನವಾಗುವಂತೆ ಪ್ರತಿ ತಾಲೂಕು ಕೇಂದ್ರಗಳಲ್ಲಿ ಐನೂರು ಜನ ಜಮಾವಣೆ ಸಾಮರ್ಥ್ಯದ ಸುಸಜ್ಜಿತ ಬ್ಯಾರಿ ಜನಾಂಗ ಭವನ ನಿರ್ಮಾಣ ವನ್ನು ಮಾಡಲು ಮನವಿ ಮಾಡಲಾಯಿತು.
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತ ಇಲಾಖೆ, ಕಂದಾಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಯ ಜಂಟಿ ಸಹಯೋಗದೊಂದಿಗೆ ಈ ಯೋಜನೆಯನ್ನು ಅನುಷ್ಠಾನ ಗೊಳಿಸಲು ಶಿಫಾರಸ್ಸು ಮಾಡಲು ಅಪೇಕ್ಷಿಸಲಾಯಿತು. ಅಬ್ದುಲ್ ಅಝೀಝ್ ಬೈಕಂಪಾಡಿ ನೇತೃತ್ವದ ಈ ನಿಯೋಗದಲ್ಲಿ ಮೊಹಮ್ಮದ್ ಹನೀಫ್.ಯು, ಅಬ್ದುಲ್ ಜಲೀಲ್ ( ಅದ್ದು ) ಕೃಷ್ಣಾಪುರ, ಇಬ್ರಾಹಿಮ್ ಬಾವ ಬಜಾಲ್ ಮತ್ತು ಅಬ್ದುಲ್ ಖಾದರ್ ಇಡ್ಮ ರವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ