ಮಂಗಳೂರು: ಅಖಿಲ ಭಾರತ ಬ್ಯಾರಿ ಮಹಾಸಭಾ ನಿಯೋಗದಿಂದ ಇಂದು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ಅಲ್ಪ ಸಂಖ್ಯಾತ ಆಯೋಗದ ಆಯುಕ್ತರಾದ ನಿಸಾರ್ ಅಹಮದ್ ರವರನ್ನು ಭೇಟಿ ಮಾಡಿ ಕರ್ನಾಟಕದಾದ್ಯಂತ ವಾಸಿಸುತ್ತಿರುವ ಸುಮಾರು ಇಪ್ಪತ್ತೈದು ಲಕ್ಷದಷ್ಟು ಜನ ಸಂಖ್ಯೆಯಲ್ಲಿರುವ ಅತಿಸೂಕ್ಷ್ಮ ಅಲ್ಪ ಸಂಖ್ಯಾತ ಮೂಲನಿವಾಸಿ ಬ್ಯಾರಿ ಭಾಷಿತ ಜನಾಂಗದ ಜನರಿಗೆ ವಿವಾಹ ಮತ್ತು ಇನ್ನಿತರ ಕಾರ್ಯಗಳಿಗೆ ಪ್ರಯೋಜನವಾಗುವಂತೆ ಪ್ರತಿ ತಾಲೂಕು ಕೇಂದ್ರಗಳಲ್ಲಿ ಐನೂರು ಜನ ಜಮಾವಣೆ ಸಾಮರ್ಥ್ಯದ ಸುಸಜ್ಜಿತ ಬ್ಯಾರಿ ಜನಾಂಗ ಭವನ ನಿರ್ಮಾಣ ವನ್ನು ಮಾಡಲು ಮನವಿ ಮಾಡಲಾಯಿತು.
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತ ಇಲಾಖೆ, ಕಂದಾಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಯ ಜಂಟಿ ಸಹಯೋಗದೊಂದಿಗೆ ಈ ಯೋಜನೆಯನ್ನು ಅನುಷ್ಠಾನ ಗೊಳಿಸಲು ಶಿಫಾರಸ್ಸು ಮಾಡಲು ಅಪೇಕ್ಷಿಸಲಾಯಿತು. ಅಬ್ದುಲ್ ಅಝೀಝ್ ಬೈಕಂಪಾಡಿ ನೇತೃತ್ವದ ಈ ನಿಯೋಗದಲ್ಲಿ ಮೊಹಮ್ಮದ್ ಹನೀಫ್.ಯು, ಅಬ್ದುಲ್ ಜಲೀಲ್ ( ಅದ್ದು ) ಕೃಷ್ಣಾಪುರ, ಇಬ್ರಾಹಿಮ್ ಬಾವ ಬಜಾಲ್ ಮತ್ತು ಅಬ್ದುಲ್ ಖಾದರ್ ಇಡ್ಮ ರವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ