ಕಬಕ: ಕರ್ನಾಟಕ ಮುಸ್ಲಿಂ ಜಮಾಅತ್, SYS, SSF ಸಂಘ ಕುಟುಂಬಗಳು ಜೊತೆ ಸೇರಿ ನಡೆಸುವ ಮಾಸಿಕ ಮಹ್ಲರತುಲ್ ಬದ್ರಿಯ್ಯಾ ಮಜ್ಲಿಸ್ ಜನವರಿ 11 ರಂದು 8 ಗಂಟೆಗೆ ಸುನ್ನೀ ಸೆಂಟರ್ ಕಬಕದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೆ.ಸಿ.ಎಫ್ ಮದೀನಾ ಖಲೀಫ ಝೋನ್ ಸದಸ್ಯರಾದ ಬಶೀರ್ ಸಅದಿ ಕಬಕ ನೇತೃತ್ವ ನೀಡಿದರು.
ಕಾರ್ಯಕ್ರಮದಲ್ಲಿ ಸಿದ್ದೀಕ್ ಹಾಜಿ ಕಬಕ ಸದಸ್ಯತ್ವ ಸಂಭ್ರಮದ ಬಗ್ಗೆ ಮಾತನಾಡಿದರು. ಮುಹಿಮ್ಮಾತ್ ಸ್ಥಾಪಕರಾದ ಸಯ್ಯಿದ್ ತ್ವಾಹಿರುಲ್ ಅಹ್ದಲ್ ಖ.ಸಿ ರವರ 19 ನೇ ಉರೂಸ್ ಮುಬಾರಕ್ ಹಾಗೂ ಮುಹಿಮ್ಮಾತ್ ಸನದುದಾನ ಸಮ್ಮೇಳನದ ಬಗ್ಗೆ SSF ಕಬಕ ಶಾಖೆಯ ಉಪಾಧ್ಯಕ್ಷರಾದ ಮುಹಮ್ಮದ್ ಮುನೀರ್ ಹಿಮಮಿ ಕಬಕ ಭಾಷಣ ಮಾಡಿದರು. ಸಯ್ಯಿದ್ ತ್ವಾಹಿರುಲ್ ಅಹ್ದಲ್ ಖ.ಸಿ ರವರನ್ನು ಅನುಸ್ಮರಿಸಿ ಅಬ್ದುರ್ರಶೀದ್ ಸಅದಿ ಸಖಾಫಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ SYS ಕಬಕ ಸರ್ಕಲ್ ಕೋಶಾಧಿಕಾರಿಯಾದ ಶಾಹುಲ್ ಹಮೀದ್ ಕಬಕ ಹಾಗೂ SSF SYS KMJ ಯ ನಾಯಕರು ಕಾರ್ಯಕರ್ತರು ಭಾಗವಹಿಸಿದರು.


















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ