ಪುತ್ತೂರು: ತಂದೆ ತಾಯಂದಿರನ್ನು ಗೌರವಿಸಿ ,ಅವರ ಪ್ರೀತಿ ಸ್ನೇಹ, ತ್ಯಾಗವನ್ನು ಮಕ್ಕಳು ಅರಿತುಕೊಂಡಲ್ಲಿ ಜೀವನಪೂರ್ತಿ ಸುಖದಿಂದಿರಬಹುದು ಎಂದು ಪಾಂಡದರ ಮರ್ಕಝ್ ಗೂಡಲ್ಲೂರು ಪ್ರಾಂಶುಪಾಲರಾದ ಡಾ. ಅಬ್ದುಲ್ ಸಲಾಂ ಮುಸ್ಲಿಯಾರ್ ದೇವರಶೋಲ ಹೇಳಿದರು.
ಅವರು ಬೆಳ್ಳಾರೆಯಲ್ಲಿ ದಾರುಲ್ ಹಿಕ್ಮ ಎಜ್ಯುಕೇಶನ್ ಸೆಂಟರ್ ಇದರ ಮೇಲಂತಸ್ತಿನ ಹಾಸ್ಟೆಲ್ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಪ್ರಭಾಷಣ ಮಾಡಿದರು, ನಮ್ಮನ್ನು ನಾವು ಕೆಟ್ಟ ತೀರ್ಮಾನಗಳಿಂದ ಸೋತು ಕಂಗೆಟ್ಟು ಕುಳಿತಾಗ ನಮ್ಮ ಕೈ ಹಿಡಿದು ಸಲುಹುವವರು ನಮ್ಮ ತಾಯಿ ತಂದೆ ಮಾತ್ರ, ಅಂತಹ ತಂದೆ ತಾಯಂದಿರು ಕಣ್ಣೀರು ಹಾಕುವ ಯಾವುದೇ ತೀರ್ಮಾನವನ್ನು ಯುವಜನತೆ ತೆಗೆದುಕೊಳ್ಳಬಾರದು. ಹಾಗೆಂದು ತೆಗೆದುಕೊಂಡಲ್ಲಿ ತಂದೆ ತಾಯಿಯ ಕಣ್ಣೀರು ಜೀವನ ಪರ್ಯಂತ ಕಾಡದಿರದು, ತಂದೆ ತಾಯಿಯರಿಗೂ ಕೂಡ ಮಕ್ಕಳೇ ಸರ್ವಸ್ವ, ಅವರಿಗೆ ಒಳ್ಳೆಯ ಧಾರ್ಮಿಕ ಶಿಕ್ಷಣ ನೀಡಿ ಅವರನ್ನು ಅಮೂಲ್ಯ ಸಂಪತ್ತಾಗಿಸಿ ಎಂದು ಕರೆ ನೀಡಿದರು.
ಇಂದು ಇಲ್ಲಿ ಹತ್ತು ಮಕ್ಕಳು ಖರಾನ್ ಶಿಕ್ಷಣ ಪಡೆದು,ಅವರಿಗೆ ಸನುದುದಾನ ನೀಡುತ್ತಿರುವುದು ಅತೀವ ಸಂತೋಷವಾಗುತ್ತಿದೆ, ಬದಲಾಗುತ್ತಿರುವ ಕಾಲಘಟ್ಟದಲ್ಲಿ ಈ ಮಕ್ಕಳು ಧಾರ್ಮಿಕ ಶಿಕ್ಷಣಕ್ಕೆ ಒತ್ತು ನೀಡಿರುವುದು ಅಭಿನಂದನೀಯ, ಇವರೆಲ್ಲರಿಗೂ ನಮ್ಮ ಮಕ್ಕಳೆಂಬ ಪ್ರೀತಿಯನ್ನು ನಾವೆಲ್ಲ ಹರಿಸಬೇಕಾಗಿದೆ ಎಂದರು , ಇಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಾಣ ವಾಗಲು ಮುಂಚೂಣಿಯಲ್ಲಿ ನಿಂತ ಪ್ರಮುಖರ ಹಾಗೂ ಸಹಕರಿಸಿದವರ ಮನಸ್ಸು ಪರಿಶುದ್ದವಾಗಿದೆ, ಹಾಗಾಗಿ ಈ ರೀತಿಯ ಕಟ್ಟಡ ತೆಲೆಯೆತ್ತಿನಿಂತು ಇನ್ನಷ್ಟು ಮಕ್ಕಳಿಗೆ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಿದ್ದಾರೆ ಎಂದು ಹೇಳಿದರು.


ಮಾಪಲಡ್ಕ ಮುದರಿಸ್ ಹಾಫಿಝ್ ಅಬ್ದುಸ್ಸಲಾಂ ನಿಝಾಮಿ ಚೆನ್ನಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೌದಿ ನ್ಯಾಷನಲ್ ಕಮಿಟಿ ಅಧ್ಯಕ್ಷ ರಶೀದ್ ಬೆಳ್ಳಾರೆ ವಹಿಸಿದ್ದರು.
ಸಯ್ಯಿದ್ ಕಾಜೂರ್ ತಂಙಳವರ ನೇತೃತ್ವದಲ್ಲಿ ಸಂಸ್ಥೆಯಲ್ಲಿ ಕಲಿತು ಸಂಪೂರ್ಣವಾಗಿ ಖುರ್ಆನ್ ಕಂಠಪಾಠ ಮಾಡಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಸನದುದಾನ ವಿತರಣೆ ನಡೆಯಿತು.ದಾರುಲ್ ಹಿಕ್ಮ ಎಜ್ಯುಕೇಶನ್ ಸೆಂಟರ್ ಇದರ ಪ್ರಧಾನ ಕಾರ್ಯದರ್ಶಿ ದಾವೂದ್ ಸಅದಿ ಬೆಳ್ಳಾರೆ, ಹಾಜೀ ಯೂಸಫ್ ಚೆನ್ನಾರ್ ಸ್ವಾಗತಿಸಿ,ವಿದ್ಯಾರ್ಥಿ ಮಹಮ್ಮದ್ ಸಲ್ಮಾನ್ ಖಿರಾಅತ್ ನಡೆಸಿದರು, ದಾರುಲ್ ಹಿಕ್ಮ ಎಜ್ಯುಕೇಶನ್ ಸೆಂಟರ್ ಇದರ ಕೋಶಾಧಿಕಾರಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಗಲ್ಫ್ ರಾಷ್ಟ್ರಗಳಲ್ಲಿ ಅತ್ಯಂತ ಚಳಿಯ ವಾತಾವರಣದಲ್ಲಿ ಮತ್ತು ಅಪರಿಮಿತ ಬಿಸಿಲಿನ ಬೇಗೆಯಲ್ಲಿ ಕೆಲಸ ಮಾಡುತ್ತಿರುವ ನೂರಾರು ಸಂಖ್ಯೆಯ ಸಾದಾರಣ ಜನರಿಂದ ಈ ಕಟ್ಟಡ ನಿರ್ಮಾಣ ಸಾಧ್ಯವಾಗಿದೆ, ಅವರೆಲ್ಲರ ಬೆವರ ಹನಿ ಈ ಕಟ್ಟಡದಲ್ಲಿದೆ , ಎಲ್ಲಾದಾನಿಗಳ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ