janadhvani

Kannada Online News Paper

DKSC ಕುವೈತ್: ವಾರ್ಷಿಕ ಮಹಾಸಭೆ- ಯೂಸುಫ್ ಅಬ್ಬಾಸ್ ಪುನರಾಯ್ಕೆ

ಕುವೈತ್ ಸಿಟಿ: ಡಿಕೆಎಸ್ಸಿ ಇದರ ಕುವೈತ್ ರಾಷ್ಟ್ರೀಯ ಸಮಿತಿಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಸಾಲ್ಮಿಯ ಸುನ್ನಿ ಸೆಂಟರ್ ನಲ್ಲಿ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹು ಯೂಸುಫ್ ಅಬ್ಬಾಸ್ ಬಾರೂದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗೌರವಾಧ್ಯಕ್ಷರಾದ ಶಫೀಕ್ ಅಹ್ಸನಿ ಯವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು DKSC ಕೇಂದ್ರ ಸಮಿತಿ ವೀಕ್ಷಕರಾಗಿ ಆಗಮಿಸಿದ್ದ , *DKSC ವಿಷನ್ ’30* ಇದರ ಚೇರ್ಮನ್ ಹಾತಿಂ ಹಾಜಿ ಕೂಳೂರು ಉದ್ಘಾಟಿಸಿದರು.

ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡನೆ ಬಳಿಕ ಸಭೆಯ ಅಂಗೀಕಾರ ಪಡೆಯಲಾಯಿತು.
DKSC ಕುವೈತ್ ಇದರ ರಾಯಭಾರಿಯಾಗಿ ಆಗಮಿಸಿದ್ದ ಅಝೀಝ್ ಮೂಳೂರು ನೇತೃತ್ವದಲ್ಲಿ ಸಮಿತಿ ಬರ್ಕಾಸ್ತು ಗೊಳಿಸಿ ಹೊಸ ಸಮಿತಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಯೂಸುಫ್ ಅಬ್ಬಾಸ್ ಬಾರುದ್ ಅವರನ್ನು ಅಧ್ಯಕ್ಷರಾಗಿ ಮರು ಆಯ್ಕೆ ಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ಲಿಯಾಕತ್ ಗಂಗಾವಳಿ ಹಾಗೂ ಕೋಶಾಧಿಕಾರಿಯಾಗಿ ಇಂತಿಯಾಝ್ ಸೂರಿಂಜೆ
ಅವರನ್ನು ಆರಿಸಲಾಯಿತು.
15 ಮಂದಿ ಕಾರ್ಯಕಾರಿ ಸಮಿತಿಯನ್ನು ಒಳಗೊಂಡ ನೂತನ ಸಮಿತಿಯನ್ನು ರಚಿಸಲಾಯಿತು.

DKSC ಸಂಸ್ಥೆಯ ಹ್ರಸ್ವ ಪರಿಚಯ ಮಾಡುವ ವಿಡಿಯೋ ವನ್ನು ಪ್ರದರ್ಶನ ಮಾಡಲಾಯಿತು.

ಅತಿಥಿಗಳನ್ನು ಸನ್ಮಾನಿಸಿ ಕೇಂದ್ರ ಸಮಿತಿ ಯ ಕಳೆದ ವರ್ಷ ದ ಪ್ರಮುಖ ಯೋಜನೆಗಳನ್ನು ಸಭೆಗೆ ತಿಳಿಸಲಾಯಿತು. ಕುವೈತ್ ನಲ್ಲಿರುವ ಪ್ರಮುಖ ಸಂಘಟನೆಯ ನೇತಾರರ ಅಭಿನಂದನಾ ಭಾಷಣ ಮುಗಿದ ಬಳಿಕ ಗೌರವಾಧ್ಯಕ್ಷರಾದ ಅಬ್ದುರ್ರಹ್ಮಾನ್ ಸಖಾಫಿ ದುಆ ನೆರವೇರಿಸಿದರು. ಶಫೀಕ್ ಅಹ್ಸನಿ ಸ್ವಾಗತಿಸಿ ಳಿಯಾಕತ್ ಗಂಗಾವಳಿ ವಂದಿಸಿದರು. ಕಾರ್ಯಕ್ರಮ ವನ್ನು ಹೈದರ್ ಉಚ್ಚಿಲ ನಿರೂಪಿಸಿದರು.

error: Content is protected !! Not allowed copy content from janadhvani.com