ಕುವೈತ್ ಸಿಟಿ: ಡಿಕೆಎಸ್ಸಿ ಇದರ ಕುವೈತ್ ರಾಷ್ಟ್ರೀಯ ಸಮಿತಿಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಸಾಲ್ಮಿಯ ಸುನ್ನಿ ಸೆಂಟರ್ ನಲ್ಲಿ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹು ಯೂಸುಫ್ ಅಬ್ಬಾಸ್ ಬಾರೂದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗೌರವಾಧ್ಯಕ್ಷರಾದ ಶಫೀಕ್ ಅಹ್ಸನಿ ಯವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು DKSC ಕೇಂದ್ರ ಸಮಿತಿ ವೀಕ್ಷಕರಾಗಿ ಆಗಮಿಸಿದ್ದ , *DKSC ವಿಷನ್ ’30* ಇದರ ಚೇರ್ಮನ್ ಹಾತಿಂ ಹಾಜಿ ಕೂಳೂರು ಉದ್ಘಾಟಿಸಿದರು.
ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡನೆ ಬಳಿಕ ಸಭೆಯ ಅಂಗೀಕಾರ ಪಡೆಯಲಾಯಿತು.
DKSC ಕುವೈತ್ ಇದರ ರಾಯಭಾರಿಯಾಗಿ ಆಗಮಿಸಿದ್ದ ಅಝೀಝ್ ಮೂಳೂರು ನೇತೃತ್ವದಲ್ಲಿ ಸಮಿತಿ ಬರ್ಕಾಸ್ತು ಗೊಳಿಸಿ ಹೊಸ ಸಮಿತಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಯೂಸುಫ್ ಅಬ್ಬಾಸ್ ಬಾರುದ್ ಅವರನ್ನು ಅಧ್ಯಕ್ಷರಾಗಿ ಮರು ಆಯ್ಕೆ ಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ಲಿಯಾಕತ್ ಗಂಗಾವಳಿ ಹಾಗೂ ಕೋಶಾಧಿಕಾರಿಯಾಗಿ ಇಂತಿಯಾಝ್ ಸೂರಿಂಜೆ
ಅವರನ್ನು ಆರಿಸಲಾಯಿತು.
15 ಮಂದಿ ಕಾರ್ಯಕಾರಿ ಸಮಿತಿಯನ್ನು ಒಳಗೊಂಡ ನೂತನ ಸಮಿತಿಯನ್ನು ರಚಿಸಲಾಯಿತು.
DKSC ಸಂಸ್ಥೆಯ ಹ್ರಸ್ವ ಪರಿಚಯ ಮಾಡುವ ವಿಡಿಯೋ ವನ್ನು ಪ್ರದರ್ಶನ ಮಾಡಲಾಯಿತು.
ಅತಿಥಿಗಳನ್ನು ಸನ್ಮಾನಿಸಿ ಕೇಂದ್ರ ಸಮಿತಿ ಯ ಕಳೆದ ವರ್ಷ ದ ಪ್ರಮುಖ ಯೋಜನೆಗಳನ್ನು ಸಭೆಗೆ ತಿಳಿಸಲಾಯಿತು. ಕುವೈತ್ ನಲ್ಲಿರುವ ಪ್ರಮುಖ ಸಂಘಟನೆಯ ನೇತಾರರ ಅಭಿನಂದನಾ ಭಾಷಣ ಮುಗಿದ ಬಳಿಕ ಗೌರವಾಧ್ಯಕ್ಷರಾದ ಅಬ್ದುರ್ರಹ್ಮಾನ್ ಸಖಾಫಿ ದುಆ ನೆರವೇರಿಸಿದರು. ಶಫೀಕ್ ಅಹ್ಸನಿ ಸ್ವಾಗತಿಸಿ ಳಿಯಾಕತ್ ಗಂಗಾವಳಿ ವಂದಿಸಿದರು. ಕಾರ್ಯಕ್ರಮ ವನ್ನು ಹೈದರ್ ಉಚ್ಚಿಲ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ