ಆಲಪ್ಪುಝ | ಪುರುಷ ಮತ್ತು ಮಹಿಳೆ ಮಿಶ್ರಿತ ಕಾರ್ಯಕ್ರಮಗಳು ಇಸ್ಲಾಂ ಧರ್ಮಕ್ಕೆ ವಿರುದ್ಧವಾಗಿವೆ ಎಂಬುದು 40 ಸದಸ್ಯರ ಸಮಸ್ತ ಮುಶಾವರ (ಸಮಾಲೋಚನಾ ಸಮಿತಿ) ನಿರ್ಣಯವಾಗಿದೆ. ಅದನ್ನು ಪ್ರಸ್ತುತ ನಡೆಯುತ್ತಿರುವ ವ್ಯಾಯಾಮದ ಹೆಸರಿನಲ್ಲಿ ತನ್ನದೇ ಹೇಳಿಕೆ ಎಂಬಂತೆ ಬಿಂಬಿಸುತ್ತಿರುವುದು ದುರುದ್ದೇಶದಿಂದ ಕೂಡಿದೆ ಎಂದು ಸಮಸ್ತ ಪ್ರಧಾನ ಕಾರ್ಯದರ್ಶಿ ಹಾಗೂ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು. ಅವರು ಲಜ್ನತ್ ಗ್ರ್ಯಾಂಡ್ ಆಡಿಟೋರಿಯಂನಲ್ಲಿ ಕೇರಳ ಮುಸ್ಲಿಂ ಜಮಾಅತ್ ಆಯೋಜಿಸಿದ್ದ ಡಾ. ಎಂ.ಎಂ.ಹನೀಫ್ ಮೌಲವಿ ಸಂಸ್ಮರಣಾ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ಇಸ್ಲಾಮಿನ ನಿಯಮಗಳನ್ನು ನಿರ್ದೇಶಿಸುವ ಹಕ್ಕು ವಿದ್ವಾಂಸರಿಗಾಗಿದೆ. ಅದನ್ನು ಅವರಿಗೇ ಬಿಟ್ಟು ಕೊಡಬೇಕು. ಮಹಿಳೆಯರ ಪರ ವಕಾಲತ್ತು ವಹಿಸುವ ರಾಜಕೀಯ ಪಕ್ಷಗಳಲ್ಲಿಯೂ ಅಧಿಕಾರವನ್ನು ಪುರುಷರೇ ವಹಿಸಿಕೊಳ್ಳುತ್ತಿದ್ದಾರೆ. ಕ್ಷೇತ್ರ ಸಮಿತಿಗಳ ಪಟ್ಟಿಯನ್ನು ನೋಡಿದರೂ ಇದು ಸ್ಪಷ್ಟವಾಗುತ್ತದೆ. ಪ್ರಯಾಣಿಕರ ವಾಹನಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ಮಹಿಳೆಯರಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸಲಾಗಿದೆ, ಅದು ಅಗತ್ಯವೂ ಕೂಡ . ಮಹಿಳೆಯರನ್ನು ದಮನಿಸಲು ಅಥವಾ ಕೀಳಾಗಿ ಕಾಣಲು ಇಸ್ಲಾಂ ಸಿದ್ಧವಿಲ್ಲ. ಇಸ್ಲಾಂ ಮಹಿಳೆಯರಿಗೆ ಆಸ್ತಿ ಹಕ್ಕು ಸೇರಿದಂತೆ ಹಲವು ಹಕ್ಕುಗಳನ್ನು ನೀಡಿದೆ.
ಇಸ್ಲಾಮ್ ಜಗತ್ತಿನಲ್ಲಿ ಹರಡಿದ್ದು ದಬ್ಬಾಳಿಕೆ ಅಥವಾ ಬೆದರಿಕೆಯಿಂದಲ್ಲ. ಪ್ರವಾದಿ ಮತ್ತು ಅವರ ಸಂಗಡಿಗರು ಉತ್ತಮ ಸ್ವಭಾವ ಮತ್ತು ನಮ್ರತೆಯಿಂದ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಿದರು ಮತ್ತು ಅದನ್ನು ಮುಸ್ಲಿಮರು ಮುಂದುವರಿಸುತ್ತಾರೆ ಎಂದು ಕಾಂತಪುರಂ ಹೇಳಿದರು.
ಸಮಸ್ತ ಕೇಂದ್ರದ ಮುಶಾವರ ಸದಸ್ಯ ಎ ತ್ವಾಹಾ ಮುಸ್ಲಿಯಾರ್ ಕಾಯಂಕುಳಂ ಅನುಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೇರಳ ಮುಸ್ಲಿಂ ಜಮಾಅತ್ ಕೌನ್ಸಿಲ್ ಜಿಲ್ಲಾಧ್ಯಕ್ಷ ಸಯ್ಯಿದ್ ಹೆಚ್ ಅಬ್ದುನಾಸರ್ ತಂಙಳ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯ ಡಾ. ಪಿಎ ಮುಹಮ್ಮದ್ ಕುಂಞ ಸಖಾಫಿ ಮುಖ್ಯ ಪ್ರಭಾಷಣಗೈದರು.
ರಾಜ್ಯ ಮಾಹಿತಿ ಆಯುಕ್ತ ಡಾ. ಎ.ಎ.ಹಕೀಂ, ಮಾಜಿ ಸಂಸದ. ಎ.ಎಂ.ಆರಿಫ್, ಮಾಜಿ ಶಾಸಕ ಎ.ಎ.ಶುಕೂರ್, ಪಿ.ಕೆ.ಮಹಮ್ಮದ್ ಬಾದುಶಾ ಸಖಾಫಿ, ಕೇರಳ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಸದಸ್ಯ ಪಿ.ಎ.ಹೈದ್ರೋಸ್ ಹಾಜಿ, ಲಜ್ನತುಲ್ ಮುಹಮ್ಮದಿಯಾ ಅಧ್ಯಕ್ಷ ಎ.ಎಂ.ನಝೀರ್ ಮಾತನಾಡಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ