ರಿಯಾದ್: ಸೌದಿ ಅರೇಬಿಯಾದಲ್ಲಿ ನಿನ್ನೆ ನಡೆದ ವಾಹನ ಅಪಘಾತದಲ್ಲಿ ಒಂಬತ್ತು ಮಂದಿ ಭಾರತೀಯರು ಸೇರಿದಂತೆ ಕನಿಷ್ಠ 15 ಜನರು ಮೃತಪಟ್ಟಿದ್ದಾರೆ. ಸೌದಿ ಅರೇಬಿಯಾದ ನೈಋತ್ಯ ಪ್ರಾಂತ್ಯದ ಜಿಝಾನ್ನಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಗೆ ಟ್ರೇಲರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಈ ಘಟನೆ ಸೋಮವಾರ ಬೆಳಿಗ್ಗೆ ಅರಾಮ್ಕೊ ರಿಫೈನರಿ ರಸ್ತೆಯಲ್ಲಿ ನಡೆದಿದೆ. ಮೃತರಲ್ಲಿ 15 ಮಂದಿಯೂ ಜುಬೈಲ್ ಎಸಿಐಸಿ ಕಂಪನಿಯ ಉದ್ಯೋಗಿಗಳಾಗಿದ್ದರು. ಮೃತಪಟ್ಟವರಲ್ಲಿ ಮೂವರು ನೇಪಾಳಿಗಳು ಮತ್ತು ಮೂವರು ಘಾನಾದವರು ಸೇರಿದ್ದಾರೆ. ಗಂಭೀರವಾಗಿ ಗಾಯಗೊಂಡ 11 ಜನರನ್ನು ಜಿಝಾನ್ ಮತ್ತು ಅಬಹಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಅರಾಮ್ಕೊ ಯೋಜನೆಯ ಕೆಲಸದ ಸ್ಥಳಕ್ಕೆ 26 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಎಸಿಐಸಿ ಸರ್ವಿಸ್ ಕಂಪನಿಗೆ ಸೇರಿದ ಮಿನಿ ಬಸ್ ಅಪಘಾತಕ್ಕೀಡಾಗಿದೆ. ನಾಗರಿಕ ರಕ್ಷಣಾ ದಳದ ನೇತೃತ್ವದಲ್ಲಿ ಸಂಪೂರ್ಣವಾಗಿ ನಾಶವಾದ ಮಿನಿಬಸ್ನಿಂದ ಮೃತದೇಹಗಳು ಮತ್ತು ಗಾಯಾಳುಗಳನ್ನು ಹೊರತೆಗೆಯಲಾಯಿತು. 15 ಜನರು ಸ್ಥಳದಲ್ಲೇ ಮೃತಪಟ್ಟಿದ್ದರು.
ಮೃತರನ್ನು ವಿಷ್ಣು ಪ್ರಸಾದ್ ಪಿಳ್ಳೈ(ಕೇರಳ 31 ವರ್ಷ), ಹೇಶ್ ಚಂದ್ರ, ಮುಝಾಫರ್ ಹುಸೈನ್ ಖಾನ್ ಇಮ್ರಾನ್, ಪುಷ್ಕರ್ ಸಿಂಗ್ ದಾಮಿ, ಸಖಲೈನ್ ಹೈದರ್, ತಾರಿಕ್ ಆಲಂ ಮುಹಮ್ಮದ್ ಝಹೀರ್ (ಬಿಹಾರ, 46 ವರ್ಷ), ಮುಹಮ್ಮದ್ ಮೊಹ್ತಶಂ ರಝಾ (ಬಿಹಾರ, 27 ವರ್ಷ), ದಿನಕರ್ ಬಾಯಿ ಹರಿದೈ ಥಂಡಲ್ ಮತ್ತು ರಮೇಶ್ ಕಪೇಲಿ ( ತೆಲಂಗಾಣ, 32) ಮೃತಪಟ್ಟ ಭಾರತೀಯರು ಎಂದು ಗುರುತಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ