ರಿಯಾದಿನಲ್ಲಿ ಹೃದಯಾಘಾತಕ್ಕೊಳಗಾಗಿ ಮರಣ ಹೊಂದಿದ ಮನ್ಸೂರ್ ಮುಲ್ಕಿಯವರ ಅಂತ್ಯಕ್ರಿಯೆಯನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.
ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಕೂಡಲೇ ಅನಿವಾಸಿ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.

ಚಿಕಿತ್ಸೆ ಫಲಿಸದೆ 26/01/2025ರಂದು ಮರಣ ಹೊಂದಿದ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರು ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ .
ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ರಿಯಾದ್ ಕೆಸಿಎಫ್ ಸಾಂತ್ವನ ಇಲಾಖೆ ನಾಯಕರಾದ ಮಜೀದ್ ವಿಟ್ಲ, ಸಲಾಂ ಹಳೆಯಂಗಡಿ, ಅಶ್ರಫ್ KMS, ಮೃತರ ಕುಟುಂಬಸ್ಥರಾದ ಜಾಫರ್ ಹಾಗೂ ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ. ಊರಿನಲ್ಲಿ ಮೃತರ ಕುಟುಂಬಸ್ಥರು ಎಲ್ಲಾ ರೀತಿಯಲ್ಲೂ ಸಹಕರಿಸಿದ್ದಾರೆ.
ರಿಯಾದಿನ ಅಲ್ ರಾಜಿ ಮಸ್ಜಿದ್ನಲ್ಲಿ ಮಯ್ಯಿತ್ ನಮಾಝ್ ನಿರ್ವಹಿಸಿ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಗೆ ಮೃತದೇಹವನ್ನು ಕೊಂಡೊಯ್ಯಲಾಯಿತು.
ನಸೀಂನಲ್ಲಿ ನಡೆದ ದಫನ್ ಕಾರ್ಯದ ನೇತೃತ್ವವವನ್ನು ಕೆಸಿಎಫ್ ರಿಯಾದ್ ಝೋನ್ ದಾಇ ಮುಸ್ತಫಾ ಸಅದಿ ಮತ್ತು ಮೃತರ ಬಾವ ಇಕ್ಬಾಲ್ ಸಅದಿ ವಹಿಸಿದ್ದರು. ಝೋನ್ ಅಧ್ಯಕ್ಷರಾದ ಹಂಝ ಉಸ್ತಾದ್ ಚೋಕಂಡಳ್ಳಿ (ಕೊಡಗು), ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಹಳೆಯಂಗಡಿ, ಮೃತರು ದುಡಿಯುತ್ತಿದ್ದ ಸಂಸ್ಥೆಯ ಮಾಲೀಕರಾದ ಸಿರಾಜುದ್ದೀನ್ ಕಣ್ಣಂಗಾರ್, ಕೆಸಿಎಫ್ ನಾಯಕರಾದ ನಝೀರ್ ಹಾಜಿ ಕಾಶಿಪಟ್ಣ, ಶಿಹಾಬುದ್ದೀನ್ ಸಖಾಫಿ, ದಾವೂದ್ ಸಅದಿ, ಇಸ್ಮಾಯಿಲ್ ಮದನಿ, ಅಶ್ರಫ್ ಗುರುಪುರ,ಫಾರೂಕ್ ಪಾಣೆಮಂಗಳೂರು, ಫಾರಿಸ್ ಕೂಳೂರು, ಹಮೀದ್ ಮಠ ಸೇರಿದಂತೆ ಕೆಸಿಎಫ್ ರಾಷ್ಟ್ರೀಯ, ಝೋನ್ ನಾಯಕರು, ಕಾರ್ಯಕರ್ತರು, ಕುಟುಂಬಸ್ಥರು, ಗೆಳೆಯರು, ಸಹೋದ್ಯೋಗಿಗಳು ಹಾಗೂ ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮೃತರು ಪತ್ನಿ, ಮೂರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ