ಮಂಗಳೂರು:(ಜನಧ್ವನಿ ವಾರ್ತೆ) ಅನಿವಾಸಿ ಮುಸ್ಲಿಂ ಕನ್ನಡಿಗರ ಅಂತಾರಾಷ್ಟ್ರೀಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್.) ಇದರ “ಇಂಟರ್ನಾಷನಲ್ ಸಮ್ಮಿಟ್” ಇಂದು ಪೂರ್ವಾಹ್ನ ಹನ್ನೊಂದುವರೆ ಗಂಟೆಗೆ ಮಂಗಳೂರು ಹಂಪನಕಟ್ಟೆಯ ಸೂರ್ಯ ಕನ್ವೆನ್ಷನ್ ಹಾಲ್ನಲ್ಲಿ ನಡೆಯಲಿದೆ.
ಸೌದಿ ಅರೇಬಿಯಾ, ಯು.ಎ.ಇ., ಬಹರೈನ್, ಕುವೈಟ್, ಖತರ್, ಓಮಾನ್, ಮಲೇಷ್ಯಾ ಹಾಗೂ ಲಂಡನ್ ಗಳಲ್ಲಿ ಘಟಕಗಳನ್ನು ಹೊಂದಿರುವ ಕೆ.ಸಿ.ಎಫ್., ಕನ್ನಡಿಗ ಮುಸ್ಲಿಮರ ಸಾಮಾಜಿಕ, ಸಾಂಸ್ಕೃತಿಕ ವೇದಿಕೆಯಾಗಿ ಕಾರ್ಯಾಚರಿಸುತ್ತಿದೆ.
ಐದು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಸಂಘಟನೆಯಲ್ಲಿ ಸದ್ಯ ಹತ್ತು ಸಾವಿರಕ್ಕೂ ಅಧಿಕ ಮಂದಿ ಸದಸ್ಯರಿದ್ದು ಊರಿನ ವಿವಿಧ ಜನಪರ ಕಾರ್ಯಗಳಿಗಾಗಿ ಅವರು ಸಕ್ರಿಯವಾಗಿ ದುಡಿಯುತ್ತಿದ್ದಾರೆ
ಸದರಿ ಸಂಘಟನೆಯ ಅಂತಾರಾಷ್ಟ್ರೀಯ ಸಮಿತಿಯ ಮಹಾಸಭೆಯ ಅಂಗವಾಗಿ ಇಂದು ನಡೆಯುವ ಸಮಾವೇಶದಲ್ಲಿ ರಾಜ್ಯದ ಸುನ್ನೀ ಸಂಘಟನಾ ಪ್ರಮುಖರು ಭಾಗವಹಿಸಲಿದ್ದು ಕರ್ನಾಟಕ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಶೈಖುನಾ ಬೇಕಲ್ ಉಸ್ತಾದ್ ಉದ್ಘಾಟನೆ ಮಾಡಲಿದ್ದಾರೆ.
ಊರಿನಲ್ಲಿರುವ ಎಲ್ಲಾ ಕೆಸಿಎಫ್ ಸದಸ್ಯರು ಸಮಾವೇಶದಲ್ಲಿ ಭಾಗವಹಿಸುವಂತೆ ಅಧ್ಯಕ್ಷ ಎಸ್ ಪಿ.ಹಂಝ ಸಖಾಫಿ ಬಂಟ್ವಾಳ ವಿನಂತಿಸಿಕೊಂಡಿದ್ದಾರೆ















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ