ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಉರೂಸ್ ಸಮಾರಂಭವು ಜನವರಿ 24 ರಂದು ಆರಂಭಗೊಂಡಿದ್ದು, ಫೆಬ್ರುವರಿ ಎರಡರಂದು ಸಮಾಪ್ತಿಯಾಗಲಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಸ್ ಎಂ ಎ ಕರ್ನಾಟಕ ರಾಜ್ಯಾಧ್ಯಕ್ಷರು ಹಾಗೂ ಬೆಳ್ತಂಗಡಿ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಇಸ್ಮಾಯಿಲ್ ತಂಙಳ್ ಉಜಿರೆ ಯವರು ಕರೆ ನೀಡಿದ್ದಾರೆ.
ಇಂದು ಜನವರಿ 30 ಗುರುವಾರದಂದು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ರಾಂತಿಯ ಹರಿಕಾರ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ. ಪಿ. ಅಬೂಬಕರ್ ಮುಸ್ಲಿಯಾರ್ ದುಆಶೀರ್ವಚನ ನೀಡಲಿದ್ದಾರೆ.
ಸಯ್ಯಿದ್ ಕೆ.ಪಿ.ಎಸ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ಸಮಾರಂಭವನ್ನು ಉದ್ಘಾಟಿಸಲಿದ್ದು, ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಳ್ ಬೃಹತ್ ದ್ಸಿಕ್ರ್ ಮಜ್ಲಿಸ್ ಗೆ ನೇತೃತ್ವ ನೀಡಲಿದ್ದಾರೆ. ಕರ್ನಾಟಕ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಕೆ.ಪಿ ಹುಸೈನ್ ಸಅದಿ ಕೆಸಿರೋಡ್ ಮುಖ್ಯ ಭಾಷಣ ಮಾಡಲಿದ್ದಾರೆ. ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ಫಝಲ್ ಜಮಲುಲ್ಲೈಲಿ ತಂಙಳ್ ಸಬರಬೈಲು, ಎಂ.ಎಸ್ ಕೋಯ ತಂಙಳ್ ಉಜಿರೆ, ಅಬ್ಬಾಸ್ ಸಅದಿ ಪೆರ್ನೆ, ಅಬೂಸ್ವಾಲಿಹ್ ಮುಸ್ಲಿಯಾರ್ ಕಿಲ್ಲೂರು, ಉಮರ್ ಸಖಾಫಿ ಕಾಜೂರು, ಶಂಸೀರ್ ಸಖಾಫಿ ಪರಪ್ಪು, ಮುಹಮ್ಮದ್ ತೌಸೀಫ್ ಸಅದಿ ಹರೇಕಳ, ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು ಮುಂತಾದವರು ಭಾಗವಹಿಸಲಿದ್ದಾರೆಂದು ಉರೂಸ್ ಸಮಿತಿ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಜೆ.ಎಚ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ