ಕರ್ನಾಟಕ ಕಲ್ಚರಲ್ ಫೌಂಡೇಶನ್ – ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಆಯೋಜಿಸುತ್ತಿರುವಂತಹ ಆರನೇ ಆವೃತಿಯ ನ್ಯಾಷನಲ್ ಪ್ರತಿಭೋತ್ಸವ. ಫೆಬ್ರವರಿ 2 ಭಾನುವಾರ ಬೆಳಗ್ಗೆ 8 ರಿಂದ ಹಲವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವೇಲ್ಸ್ ಇಂಟರ್ ನ್ಯಾಷನಲ್ ಸ್ಕೂಲ್ ಸಭಾಂಗಣ ಅಲ್ ಸಂಖಾ ಅಬುದಾಬಿಯಲ್ಲಿ ನಡೆಯಲಿದೆ.
ಐದು ವೇದಿಕೆಗಳಲ್ಲಿ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಯುಎಇ ಯ ಎಂಟು ಝೋನ್ ಗಳಿಂದ ಆಯ್ಕೆಯಾದ 400 ಕ್ಕೂ ಅಧಿಕ ಕನ್ನಡಿಗ ಪ್ರತಿಭೆಗಳು 88 ರಷ್ಟು ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣೆ ಮಾಡಲಿದ್ದಾರೆ. ಕೆಸಿಎಫ್ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು 2000 ದಷ್ಟು ಕುಟುಂಬಗಳು ಪಾಲ್ಗೊಳ್ಳಲಿದ್ದಾರೆ.
ಬೆಳಿಗ್ಗೆ 8 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಪ್ರತಿಭೋತ್ಸವ ಸ್ವಾಗತ ಸಮಿತಿ ಛೇರ್ಮನ್ ಇಬ್ರಾಹಿಂ ಬ್ರೈಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಳ ಕಾರ್ಯಕ್ರಮವನ್ನು ಉದ್ಘಾಟನೆಗೈಯ್ಯಲಿದ್ದಾರೆ. ಸ್ವಾಗತ ಸಮಿತಿ ಕನ್ವಿನರ್ ಹಕೀಂ ತುರ್ಕಳಿಕೆ ಸ್ವಾಗತ ಭಾಷಣ ಮಾಡಲಿದ್ದು, ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ನಾಯಕರು ಉಪಸ್ಥಿತರಿರಲಿದ್ದಾರೆ.
ಕೆಸಿಎಫ್ ಯುಎಇ ರಾಷ್ಟ್ರೀಯ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿ ಕೆದುಂಬಾಡಿ ರವರ ಅಧ್ಯಕ್ಷತೆಯಲ್ಲಿ ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಚಿಕ್ಕಾಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಭಾಗವಹಿಸಲಿದ್ದಾರೆ. ಕೆಸಿಎಫ್ ಯುಎಇ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಬ್ರೈಟ್ ಸ್ವಾಗತ ಭಾಷಣ ನಿರ್ವಹಿಸಲಿದ್ದಾರೆ. ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಪಿಎಂಹೆಚ್ ಅಬ್ದುಲ್ ಹಮೀದ್ ಈಶ್ವರಮಂಗಳ ಉಧ್ಘಾಟನೆ ಗೈಯ್ಯಲಿದ್ದಾರೆ, ರಜಬ್ ಮುಹಮ್ಮದ್ ಉಚ್ಚಿಲ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.
ಬನಿಯಾಸ್ ಸ್ಪೈಕ್ ಗ್ರೂಪ್ ಆಫ್ ಕಂಪನೀಸ್ ಇದರ ಮಾಲಕರಾದ ಅಬ್ದುಲ್ ರಹ್ಮಾನ್ ಹಾಜಿಯವರಿಗೆ ಕೆಸಿಎಫ್ ಯುಎಇ ಮೊದಲ ಬಿಸಿನೆಸ್ ಎಕ್ಸಲೆನ್ಸ್ ಅವಾರ್ಡ್ ನ್ನು ಪ್ರದಾನಿಸಲಿದೆ.
ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಸಂಘಟನಾ ವಿಭಾಗದ ಅದ್ಸಕ್ಷರಾದ ಅಬ್ದುಲ್ ಜಲೀಲ್ ನಿಝಾಮಿ, ಜನಾಬ್ ಅಬ್ದುಲ್ ರಹ್ಮಾನ್ ಹಾಜಿ ಬನಿಯಾಸ್ ಸ್ಪೈಕ್. ಜನಾಬ್ ಅಬೂಬಕರ್ ಹಾಜಿ ಸೇಫ್ ಲೈನ್, ಜನಾಬ್ ಅಬ್ದುಲ್ ಸಲಾಂ ಪಾಪಿನಿಶೇರಿ, ಕೆಸಿಎಫ್ ಯುಎಇ ಕೋಶಾಧಿಕಾರಿ ಝೈನುದ್ದೀನ್ ಹಾಜಿ ಬೆಳ್ಳಾರೆ ಸೇರಿದಂತೆ ಹಲವು ಖ್ಯಾತ ಉದ್ಯಮಿಗಳು, ಸಾಂಘಿಕ ನಾಯಕರುಗಳು, ಸಾಮಾಜಿಕ ನೇತಾರರುಗಳು ಭಾಗವಹಿಸಲಿದ್ದಾರೆ.
ಯುಎಇ ಯಲ್ಲಿರುವ ಎಲ್ಲಾ ಅನಿವಾಸಿ ಕನ್ನಡಿಗರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕಾಗಿ ಕೆಸಿಎಫ್ ಯುಎಇ ಪತ್ರಿಕಾಗೋಷ್ಠಿಯಲ್ಲಿ ವಿನಂತಿಸಿದೆ.