ದುಬೈ: ಯುಎಇ ಯಲ್ಲಿ ಘೋಷಿಸಲಾಗಿದ್ದ ಸಾಮೂಹಿಕ ಕ್ಷಮಾದಾನವು ಕಳೆದ ಡಿಸೆಂಬರ್ 31 ರಂದು ಮುಗಿದಿದ್ದು, ಆ ಬಳಿಕ ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ಸುಮಾರು ಆರು ಸಾವಿರ ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಈ ಉದ್ದೇಶಕ್ಕಾಗಿ 270 ಕ್ಕೂ ಹೆಚ್ಚು ತಪಾಸಣೆಗಳನ್ನು ನಡೆಸಲಾಗಿದೆ. ಕಟ್ಟುನಿಟ್ಟಾದ ತಪಾಸಣೆಗಳು ಮುಂದುವರಿಯಲಿದೆ ಮತ್ತು ಕಾನೂನು ಉಲ್ಲಂಘಕಾರಿಗೆ ಸಹಾಯ ಮಾಡಬಾರದೆಂದು ಫೆಡರಲ್ ಅಥಾರಿಟಿ ಫಾರ್ ಐಡೆಂಟಿಟಿ ಅಂಡ್ ಸಿಟಿಜನ್ಶಿಪ್ನ ಮಹಾನಿರ್ದೇಶಕ ಸುಹೈಲ್ ಸಯೀದ್ ಅಲ್ ಖೈಲಿ ಕರೆ ನೀಡಿದರು.
ಕಳೆದ ವರ್ಷ ಸೆಪ್ಟೆಂಬರ್ 1 ರಿಂದ ವರ್ಷದ ಅಂತ್ಯದವರೆಗೆ ನಾಲ್ಕು ತಿಂಗಳುಗಳ ಕಾಲ ಕ್ಷಮಾದಾನ ನೀಡಲಾಗಿತ್ತು. ಈ ಅವಧಿಯಲ್ಲಿ, ಕಾನೂನು ಉಲ್ಲಂಘಿಸುವವರಿಗೆ ದೇಶಕ್ಕೆ ಮರುಪ್ರವೇಶವನ್ನುನಿರ್ಬಂಧಿಸದೆ, ದೇಶವನ್ನು ತೊರೆಯಲು ಅಥವಾ ಹೊಸ ಉದ್ಯೋಗವನ್ನು ಹುಡುಕಲು ಮತ್ತು ಕಾನೂನುಬದ್ಧವಾಗಿ ದೇಶದಲ್ಲಿ ಉಳಿಯಲು ಅವಕಾಶವನ್ನು ಹೊಂದಿದ್ದರು. 2,36,000 ಜನರು ಕ್ಷಮಾದಾನದ ಸದುಪಯೋಗವನ್ನು ಪಡೆದಿದ್ದಾರೆಂದು ಅಂದಾಜಿಸಲಾಗಿದೆ.
ಕಾನೂನು ಉಲ್ಲಂಘಿಸುವವರಿಗೆ ಆಶ್ರಯ ಮತ್ತು ಉದ್ಯೋಗ ಒದಗಿಸುವುದು ಅಪರಾಧ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅವರಿಗೆ ಸಹಾಯ ಮಾಡುವವರಿಗೆ ಕನಿಷ್ಠ ಹತ್ತು ಸಾವಿರ ದಿರ್ಹಮ್ಗಳ ದಂಡ ವಿಧಿಸಲಾಗುತ್ತದೆ. ಅಧಿಕೃತ ಪ್ರಾಯೋಜಕರಲ್ಲದೆ, ಕಾನೂನು ಉಲ್ಲಂಘಿಸುವವರನ್ನು ನೇಮಿಸಿಕೊಂಡರೆ 50,000 ದಿರ್ಹಮ್ಗಳ ದಂಡ ವಿಧಿಸಲಾಗುತ್ತದೆ. ಸಿಕ್ಕಿಬಿದ್ದವರು ಜೈಲು ಶಿಕ್ಷೆ, ಗಡೀಪಾರು ಮತ್ತು ಯುಎಇ ಪ್ರವೇಶಿಸಲು ಶಾಶ್ವತ ನಿಷೇಧ ಸೇರಿದಂತೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ