ಮಿಯಾಮಿ: ವಿಮಾನ ಟೇಕ್ ಆಫ್ ಆದ ನಂತರ ಪೈಲಟ್ ಪ್ರಜ್ಞೆ ಕಳೆದುಕೊಂಡರು, ಇದರಿಂದಾಗಿ ವಿಮಾನ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಮಿಯಾಮಿಯಿಂದ ಫ್ರಾಂಕ್ಫರ್ಟ್ಗೆ ಹೊರಟಿದ್ದ ಜರ್ಮನ್ ವಿಮಾನಯಾನ ಸಂಸ್ಥೆ ಲುಫ್ತಾನ್ಸಾದ ಬೋಯಿಂಗ್ 747 ತುರ್ತು ಭೂಸ್ಪರ್ಶ ಮಾಡಿದೆ.
ಟೇಕ್ ಆಫ್ ಆದ ಬಳಿಕ ಪೈಲಟ್ ಪ್ರಜ್ಞೆ ಕಳೆದುಕೊಂಡ ನಂತರ ಸಹ ಪೈಲಟ್ ವಿಮಾನವನ್ನು ನಿಯಂತ್ರಣಕ್ಕೆ ತೆಗೆದುಕೊಂಡು LH 463 ವಿಮಾನವನ್ನು ಮಾಂಟ್ರಿಯಲ್ಗೆ ತಿರುಗಿಸಲಾಯಿತು. ಈ ಸಮಯದಲ್ಲಿ, ವಿಮಾನ ಸಿಬ್ಬಂದಿ ಪೈಲಟ್ಗೆ ಪ್ರಥಮ ಚಿಕಿತ್ಸೆ ನೀಡಿದರು. ಪೈಲಟ್ನ ಪ್ರಜ್ಞೆ ತಪ್ಪಿದ ಸ್ಥಿತಿ ಮತ್ತು ಹವಾಮಾನ ಹದಗೆಡುತ್ತಿರುವುದನ್ನು ಪರಿಗಣಿಸಿ, 30,000 ಅಡಿ ಎತ್ತರದಲ್ಲಿರುವ ವಿಮಾನವನ್ನು ನೋವಾ ಸ್ಕಾಟಿಯಾಕ್ಕೆ ತಿರುಗಿಸಲು ನಿರ್ಧರಿಸಲಾಯಿತು.ನಂತರ ವಿಮಾನವು ಮಾಂಟ್ರಿಯಲ್ನಲ್ಲಿ ಸುರಕ್ಷಿತವಾಗಿ ಇಳಿಯಿತು. ಇದು ವಿಮಾನದ ಮೂಲ ಗಮ್ಯಸ್ಥಾನದಿಂದ 1,500 ಮೈಲಿ ದೂರದಲ್ಲಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ಲುಫ್ಥಾನ್ಸ ವಿಷಾದ ವ್ಯಕ್ತಪಡಿಸಿದೆ. ಪ್ರಯಾಣಿಕರ ಸುರಕ್ಷತೆಯೇ ತನ್ನ ಪ್ರಮುಖ ಆದ್ಯತೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.
ಪೈಲಟ್ ಪ್ರಜ್ಞೆ ತಪ್ಪಿದ್ದಕ್ಕೆ ಕಾರಣ ಸ್ಪಷ್ಟವಾಗಿಲ್ಲ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಹೊಸ ಮಾಹಿತಿ ಲಭ್ಯವಿಲ್ಲ. ವಿಮಾನ ಸುರಕ್ಷಿತವಾಗಿ ಇಳಿಯಿತು ಮತ್ತು ಪೈಲಟ್ಗೆ ತುರ್ತು ವೈದ್ಯಕೀಯ ನೆರವು ನೀಡಲಾಯಿತು ಎಂದು ಲುಫ್ಥಾನ್ಸ ವಕ್ತಾರರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ