ಇಡ್ಕಿದು :ಸುನ್ನಿ ಸ್ಟೂಡೆಂಟ್ ಫೆಡರೇಷನ್ (SSF) ಸುನ್ನಿ ಯುವಜನ ಸಂಘ (SYS) ಕರ್ನಾಟಕ ಮುಸ್ಲಿಂ ಜಮಅತ್ (KMJ )ಕೋಲ್ಪೆ ಶಾಖೆ. ಇದರ ಆಶ್ರಯದಲ್ಲಿ SSF ಕೋಲ್ಪೆ ಶಾಖೆಯ ದಶವಾರ್ಷಿಕ ಸಂಭ್ರಮದ ಅಂಗವಾಗಿ ಬ್ರಹತ್ ಮದನಿಯಂ ಆಧ್ಯಾತ್ಮಿಕ ಮಜ್ಲಿಸ್ ನಡೆಯಲಿದೆ.
ಲಕ್ಷಾಂತರ ವಿಶ್ವಾಸಿಗಳು ಪಾಲ್ಗೊಳ್ಳುವ ಬಹು:ಅಬ್ದುಲ್ ಲತೀಫ್ ಸಖಾಫಿ ಉಸ್ತಾದರ ನೇತೃತ್ವದಲ್ಲಿ “ಮದನಿಯಂ” ಆತ್ಮೀಯ ಮಜ್ಲೀಸ್ ಕಾರ್ಯಕ್ರಮವು ಫೆಬ್ರವರಿ 20 ರಂದು ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಸಮಯ 6:30 ಕ್ಕೆ ಸರಿಯಾಗಿ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಅಲ್ ಹಾಜ್ ಅಸ್ಸಯ್ಯಿದ್ ಪೂಕುಂಞ ತಂಙಳ್ ಉದ್ಯಾವರ ದುಃಅ ಮಜ್ಲಿಸ್ ಗೆ ನೇತೃತ್ವ ನೀಡಲಿದ್ದಾರೆ.
ಕಾರ್ಯಕ್ರಮವನ್ನು ಸ್ಥಳೀಯ ಜಮಾಅತ್ ಖತೀಬರಾದ ಬಹು| ನೌಶಾದ್ ಕಾಮಿಲ್ ಸಖಾಫೀ ಅಲ್ ಫುರ್ಖಾನಿ ಬೆಲ್ಮ ಉದ್ಘಾಟಿಸಲಿದ್ದು. ಬದ್ರಿಯಾ ಜುಮಾ ಮಸೀದಿ ಕೋಲ್ಪೆ ಅಧ್ಯಕ್ಷ ಜನಾಬ್| ಶೇಖಬ್ಬ ಹಾಜಿ ಕೋಲ್ಪೆ ಇವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಧ್ವಜಾರೋಹಣವನ್ನು ಮದನಿಯಂ ಸಮಿತಿ ಅಧ್ಯಕ್ಷ ಜನಾಬ್| ಹಮೀದ್ ಕನ್ಯಾನ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಸಭೆಯ ಗೌರವಾನ್ವಿತ ಸಭಾಧ್ಯಕ್ಷರಾದ ಯು.ಟಿ ಖಾದರ್, ಕರ್ನಾಟಕ ರಾಜ್ಯ ಅಲೈಡ್ ಆ್ಯಂಡ್ ಆರೋಗ್ಯ ರಕ್ಷಣಾ ಮಂಡಳಿಯ ಅಧ್ಯಕ್ಷ ಡಾ.ಯು.ಟಿ.ಇಫ್ತಿಕಾರ್ ಅಲಿ, ಜನಪ್ರಿಯ ಗ್ರೂಪ್ ಚೇರ್ಮ್ಯಾನ್ ಡಾ. ಅಬ್ದುಲ್ ಬಶೀರ್ ವಿ.ಕೆ . ಹಾಗು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಮ್. ಎಸ್ ಮೊಹಮ್ಮದ್ ಸಹಿತ ಪ್ರಮುಖರು ಹಾಗೂ ಹಲವಾರು ಸಾದಾತ್ ಗಳು ಉಲಮಾ, ಉಮಾರಾ ನೇತಾರರು ಭಾಗವಹಿಸಲಿದ್ದಾರೆ.
ಅದೇ ದಿನ ಅಸರ್ ನಮಾಝಿನ ಬಳಿಕ ಮಾಸಿಕ ಮಲ್ಹರತುಲ್ ಬದ್ರಿಯ್ಯಾ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್