ಇಡ್ಕಿದು :ಸುನ್ನಿ ಸ್ಟೂಡೆಂಟ್ ಫೆಡರೇಷನ್ (SSF) ಸುನ್ನಿ ಯುವಜನ ಸಂಘ (SYS) ಕರ್ನಾಟಕ ಮುಸ್ಲಿಂ ಜಮಅತ್ (KMJ )ಕೋಲ್ಪೆ ಶಾಖೆ. ಇದರ ಆಶ್ರಯದಲ್ಲಿ SSF ಕೋಲ್ಪೆ ಶಾಖೆಯ ದಶವಾರ್ಷಿಕ ಸಂಭ್ರಮದ ಅಂಗವಾಗಿ ಬ್ರಹತ್ ಮದನಿಯಂ ಆಧ್ಯಾತ್ಮಿಕ ಮಜ್ಲಿಸ್ ನಡೆಯಲಿದೆ.
ಲಕ್ಷಾಂತರ ವಿಶ್ವಾಸಿಗಳು ಪಾಲ್ಗೊಳ್ಳುವ ಬಹು:ಅಬ್ದುಲ್ ಲತೀಫ್ ಸಖಾಫಿ ಉಸ್ತಾದರ ನೇತೃತ್ವದಲ್ಲಿ “ಮದನಿಯಂ” ಆತ್ಮೀಯ ಮಜ್ಲೀಸ್ ಕಾರ್ಯಕ್ರಮವು ಫೆಬ್ರವರಿ 20 ರಂದು ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಸಮಯ 6:30 ಕ್ಕೆ ಸರಿಯಾಗಿ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಅಲ್ ಹಾಜ್ ಅಸ್ಸಯ್ಯಿದ್ ಪೂಕುಂಞ ತಂಙಳ್ ಉದ್ಯಾವರ ದುಃಅ ಮಜ್ಲಿಸ್ ಗೆ ನೇತೃತ್ವ ನೀಡಲಿದ್ದಾರೆ.
ಕಾರ್ಯಕ್ರಮವನ್ನು ಸ್ಥಳೀಯ ಜಮಾಅತ್ ಖತೀಬರಾದ ಬಹು| ನೌಶಾದ್ ಕಾಮಿಲ್ ಸಖಾಫೀ ಅಲ್ ಫುರ್ಖಾನಿ ಬೆಲ್ಮ ಉದ್ಘಾಟಿಸಲಿದ್ದು. ಬದ್ರಿಯಾ ಜುಮಾ ಮಸೀದಿ ಕೋಲ್ಪೆ ಅಧ್ಯಕ್ಷ ಜನಾಬ್| ಶೇಖಬ್ಬ ಹಾಜಿ ಕೋಲ್ಪೆ ಇವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಧ್ವಜಾರೋಹಣವನ್ನು ಮದನಿಯಂ ಸಮಿತಿ ಅಧ್ಯಕ್ಷ ಜನಾಬ್| ಹಮೀದ್ ಕನ್ಯಾನ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಸಭೆಯ ಗೌರವಾನ್ವಿತ ಸಭಾಧ್ಯಕ್ಷರಾದ ಯು.ಟಿ ಖಾದರ್, ಕರ್ನಾಟಕ ರಾಜ್ಯ ಅಲೈಡ್ ಆ್ಯಂಡ್ ಆರೋಗ್ಯ ರಕ್ಷಣಾ ಮಂಡಳಿಯ ಅಧ್ಯಕ್ಷ ಡಾ.ಯು.ಟಿ.ಇಫ್ತಿಕಾರ್ ಅಲಿ, ಜನಪ್ರಿಯ ಗ್ರೂಪ್ ಚೇರ್ಮ್ಯಾನ್ ಡಾ. ಅಬ್ದುಲ್ ಬಶೀರ್ ವಿ.ಕೆ . ಹಾಗು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಮ್. ಎಸ್ ಮೊಹಮ್ಮದ್ ಸಹಿತ ಪ್ರಮುಖರು ಹಾಗೂ ಹಲವಾರು ಸಾದಾತ್ ಗಳು ಉಲಮಾ, ಉಮಾರಾ ನೇತಾರರು ಭಾಗವಹಿಸಲಿದ್ದಾರೆ.
ಅದೇ ದಿನ ಅಸರ್ ನಮಾಝಿನ ಬಳಿಕ ಮಾಸಿಕ ಮಲ್ಹರತುಲ್ ಬದ್ರಿಯ್ಯಾ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ