ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ (SSF) ಬೆಂಗಳೂರು ಜಿಲ್ಲೆ ಇದರ ವಾರ್ಷಿಕ ಮಹಾಸಭೆಯು ಸೇವರಿ ಬ್ಯುಸಿನೆಸ್ ಹೋಟೆಲ್ ಮಡಿವಾಳದಲ್ಲಿ ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಲತೀಫ್ ನಈಮಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಎಸ್.ವೈ.ಎಸ್ ಜಿಲ್ಲಾ ಅಧ್ಯಕ್ಷರಾದ ಜಾಫರ್ ನೂರಾನಿ ಪ್ರಾರ್ಥನೆ ಯೊಂದಿಗೆ ಚಾಲನೆ ನೀಡಿದರು.ಸಿ ಸಿ ಕಾರ್ಯದರ್ಶಿ ಅಲ್ತಾಫ್ ಅಲಿ ಸ್ವಾಗತಿಸಿ ಕೆ.ಎಂ.ಜೆ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ರಹಮಾನ್ ಹಾಜಿ ಉದ್ಘಾಟಿಸಿದರು. ಕೋಆರ್ಡಿನೇಷನ್ ಸಮಿತಿ ಅಧ್ಯಕ್ಷರಾದ ಅನಸ್ ಸಿದ್ದೀಖಿ ತರಗತಿ ನಡೆಸಿದರು.


ರಾಜ್ಯಸಮಿತಿಯಿಂದ ವೀಕ್ಷಕರಾಗಿ ಆಗಮಿಸಿದ ಮುಸ್ತಾಫಾ ನಈಮಿ ಸಖಾಫಿ & ಜಿಲ್ಲಾ ಉಸ್ತುವಾರಿ ಮುಜೀಬ್ ಕೊಡಗು ರವರು ಕೌನ್ಸಿಲ್ ಗೆ ನೇತೃತ್ವ ನೀಡಿದರು.
ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಶಂಸುದ್ದೀನ್ ಜೆ ಪಿ ನಗರ ವಾರ್ಷಿಕ ವರದಿಯನ್ನೂ, ಕೋಶಾಧಿಕಾರಿ ಅಖ್ತರ್ ಹುಸ್ನೈನ್ ಲೆಕ್ಕಪತ್ರವನ್ನು ಮಂಡಿಸಿದರು.
ಬಳಿಕ ಕ್ರಮವಾಗಿ ಶಂಸು ಗಾಂಜಾಲ್ ಮೀಡಿಯಾ ,ಅಲ್ತಾಫ್ ಅಲಿ ಸಿಸಿ, ಅಬೂಬಕ್ಕರ್ ಅಹ್ಸನಿ ರೈಂಬೋ, ಫಾರೂಕ್ ಅಮಾನಿ ಕ್ಯೂಡಿ ,ಸಂಶುದ್ದೀನ್ ಜೆ.ಪಿ ನಗರ ಪಬ್ಲಿಕೇಶನ್ , ಹೈದರ್ ಎಲೆಕ್ಟಾನಿಕ್ ಸಿಟಿ ದಅವಾ, , ಶಬೀಬ್ ಕ್ಯಾಂಪಸ್ , ಖಲೀಲ್ ವಿಸ್ಡಮ್ , ಜುನೈದ್ ಹಿಮಮಿ ಐಟಿ ವರದಿಯನ್ನು ವಾಚಿಸಿದರು.
ಹಳೆಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಹೊಸ ಸಮಿತಿಯನ್ನು ಆರಿಸಲಾಯಿತು.
ನೂತನ ಅಧ್ಯಕ್ಷರಾಗಿ ಫಾರೂಕ್ ಅಮಾನಿ,ಕಾರ್ಯದರ್ಶಿಯಾಗಿ ಅಲ್ತಾಫ್ ಅಲಿ , ಕೋಶಾಧಿಕಾರಿಯಾಗಿ ಮುಸ್ತಾಕ್ ರವರನ್ನು ನೇಮಕಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಎಂ.ಎ ಕೋಶಾಧಿಕಾರಿ ಸತ್ತಾರ್ ಉಸ್ತಾದ್,ಎಸ್.ಜೆ.ಎಂ ಕಾರ್ಯದರ್ಶಿ
ತಾಜುದ್ದೀನ್ ಫಾಲಿಲಿ ,ಎಸ್.ವೈ.ಎಸ್ ರಾಜ್ಯ ನಾಯಕರಾದ ನಾಸಿರ್ ಕ್ಲಾಸಿಕ್ ,ಜಿಲ್ಲಾ ನಾಯಕರಾದ ಫಿರ್ದೌಸ್, ಸರ್ಶಾದ್ ಮತ್ತು ರಾಜ್ಯ ರೈಂನ್ಬೊ ಕಾರ್ಯದರ್ಶಿ ಶಿಹಾಬ್ ಮಡಿವಾಳ ಉಪಸ್ಥಿತರಿದ್ದರು .

















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ